<p><strong>ಮಡಿಕೇರಿ:</strong> ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ವ್ಯಾಪಕ ಮಳೆಯಾಗಿದ್ದರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಮಂಡಳಿ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿತು. ಆದರೆ, ಈ ರಜೆ ಘೋಷಣೆ ತಡವಾಗಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಯಿತು.</p>.<p>ವಿರಾಜಪೇಟೆ ಸೇರಿದಂತೆ ಅನೇಕ ಕಡೆ ಮಂಗಳವಾರ ರಾತ್ರಿಯಿಂದಲೇ ಮಳೆ ಒಂದೇ ಸಮನೆ ಸುರಿಯುತ್ತಿತ್ತು. ಮಡಿಕೇರಿಯಲ್ಲಿ ಭಾರಿ ಪ್ರಮಾಣದ ಗಾಳಿ ಬೀಸುತ್ತಿತ್ತು. ಆದಾಗ್ಯೂ, ಅಧಿಕಾರಿಗಳು ರಜೆ ನೀಡುವಷ್ಟರಲ್ಲಿ ಬಹುತೇಕ ವಿದ್ಯಾರ್ಥಿಗಳು ಮನೆಯಿಂದ ತೆರಳಿದ್ದರು.</p>.<p>ಮಳೆಯಲ್ಲಿ ನೆನೆಯುತ್ತಲೇ ಮನೆಯಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು ರಜೆ ಎಂದು ತಿಳಿದ ಬಳಿಕ ವಾಪಸ್ ಮನೆಗೆ ತೆರಳಿದರು ಆಗಲೂ ಮಳೆಯಲ್ಲೇ ನೆನೆಯಬೇಕಾಯಿತು. ಕೆಲವು ಕಡೆ ಭಾರಿ ಪ್ರಮಾಣದ ಗಾಳಿ ಬೀಸುತ್ತಿದ್ದುದ್ದರಿಂದ ಕೊಡೆಯನ್ನೂ ಹಿಡಿಯಲಾರದ ಸ್ಥಿತಿ ಇತ್ತು. ಇದರಿಂದ ಅಕ್ಷರಶಃ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.</p>.<p>ಸೋಮವಾರಪೇಟೆ ತಾಲ್ಲೂಕಿಗೆ ಮಂಗಳವಾರ ರಾತ್ರಿಯೇ ರಜೆ ಘೋಷಣೆ ಮಾಡಿದ್ದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿಲ್ಲ.</p>.<p>ಈ ಹಿಂದಿನಂತೆ ಜಿಲ್ಲಾಧಿಕಾರಿಯೇ ರಜೆ ಕೊಡದೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಒಪ್ಪಿಸಿದ್ದೇ ಈ ಅವಾಂತರಕ್ಕೆ ಕಾರಣವಾಗಿದೆ ಎಂದು ಬಹುತೇಕ ಪೋಷಕರು ದೂರಿದರು. ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ಅಧಿಕಾರಿಗಳ ವಿಳಂಬ ಧೋರಣೆಗೆ ವ್ಯಾಪಕ ಆಕ್ರೋಶ ಕಂಡು ಬಂತು.</p>.<p>ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಬುಧವಾರ ಸಂಜೆಯೇ ಇಡೀ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ವ್ಯಾಪಕ ಮಳೆಯಾಗಿದ್ದರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಮಂಡಳಿ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿತು. ಆದರೆ, ಈ ರಜೆ ಘೋಷಣೆ ತಡವಾಗಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಯಿತು.</p>.<p>ವಿರಾಜಪೇಟೆ ಸೇರಿದಂತೆ ಅನೇಕ ಕಡೆ ಮಂಗಳವಾರ ರಾತ್ರಿಯಿಂದಲೇ ಮಳೆ ಒಂದೇ ಸಮನೆ ಸುರಿಯುತ್ತಿತ್ತು. ಮಡಿಕೇರಿಯಲ್ಲಿ ಭಾರಿ ಪ್ರಮಾಣದ ಗಾಳಿ ಬೀಸುತ್ತಿತ್ತು. ಆದಾಗ್ಯೂ, ಅಧಿಕಾರಿಗಳು ರಜೆ ನೀಡುವಷ್ಟರಲ್ಲಿ ಬಹುತೇಕ ವಿದ್ಯಾರ್ಥಿಗಳು ಮನೆಯಿಂದ ತೆರಳಿದ್ದರು.</p>.<p>ಮಳೆಯಲ್ಲಿ ನೆನೆಯುತ್ತಲೇ ಮನೆಯಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು ರಜೆ ಎಂದು ತಿಳಿದ ಬಳಿಕ ವಾಪಸ್ ಮನೆಗೆ ತೆರಳಿದರು ಆಗಲೂ ಮಳೆಯಲ್ಲೇ ನೆನೆಯಬೇಕಾಯಿತು. ಕೆಲವು ಕಡೆ ಭಾರಿ ಪ್ರಮಾಣದ ಗಾಳಿ ಬೀಸುತ್ತಿದ್ದುದ್ದರಿಂದ ಕೊಡೆಯನ್ನೂ ಹಿಡಿಯಲಾರದ ಸ್ಥಿತಿ ಇತ್ತು. ಇದರಿಂದ ಅಕ್ಷರಶಃ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.</p>.<p>ಸೋಮವಾರಪೇಟೆ ತಾಲ್ಲೂಕಿಗೆ ಮಂಗಳವಾರ ರಾತ್ರಿಯೇ ರಜೆ ಘೋಷಣೆ ಮಾಡಿದ್ದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿಲ್ಲ.</p>.<p>ಈ ಹಿಂದಿನಂತೆ ಜಿಲ್ಲಾಧಿಕಾರಿಯೇ ರಜೆ ಕೊಡದೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಒಪ್ಪಿಸಿದ್ದೇ ಈ ಅವಾಂತರಕ್ಕೆ ಕಾರಣವಾಗಿದೆ ಎಂದು ಬಹುತೇಕ ಪೋಷಕರು ದೂರಿದರು. ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ಅಧಿಕಾರಿಗಳ ವಿಳಂಬ ಧೋರಣೆಗೆ ವ್ಯಾಪಕ ಆಕ್ರೋಶ ಕಂಡು ಬಂತು.</p>.<p>ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಬುಧವಾರ ಸಂಜೆಯೇ ಇಡೀ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>