<p><strong>ಮಡಿಕೇರಿ</strong>: ಗ್ರಾಮಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಜಿ.ಧನರಾಜು ಅವರು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಕೊಳ್ಳಲಾಗಿದ್ದು 2 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು.</p>.<p>ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.</p>.<p>ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಒ ಮತ್ತು ವಲಯ ಆರೋಗ್ಯ ಮತ್ತು ಶಿಕ್ಷಣಾಧಿಕಾರಿಗಳಿಗೆ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ಕುಮಾರ್ ಮಾತನಾಡಿ, ‘ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಈ ವಿಷಯಗಳ ಕುರಿತು ಕನಿಷ್ಠ 3-4 ಗಂಟೆಗಳ ಕಾಲ ಈ ಕಾಯಿಲೆಗಳ ಕುರಿತು ವಿಶೇಷ ಸಭೆಯಲ್ಲಿ ಹಂಚಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ತರಬೇತಿಯನ್ನು ಪಡೆದ ಅಧಿಕಾರಿಗಳು ಗ್ರಾಮಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡುತ್ತಾರೆ ಎಂದು ಅವರು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೆಶಕ ನಟರಾಜ್, ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂಧನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಾದ ಡಾ.ಡೆವಿನ್ ಭಾಗಿಯಾಗಿದ್ದರು. ಈ ವೇಳೆ ಗ್ರಾಮ ಆರೋಗ್ಯ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ಡಾ.ಶಶಿಕುಮಾರ್ ಡಿ.ಜೆ, ಕೆ.ಎಚ್.ಪಿ.ಟಿ.ಯ ಶಶಿಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಗ್ರಾಮಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಜಿ.ಧನರಾಜು ಅವರು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಕೊಳ್ಳಲಾಗಿದ್ದು 2 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು.</p>.<p>ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.</p>.<p>ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಒ ಮತ್ತು ವಲಯ ಆರೋಗ್ಯ ಮತ್ತು ಶಿಕ್ಷಣಾಧಿಕಾರಿಗಳಿಗೆ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ಕುಮಾರ್ ಮಾತನಾಡಿ, ‘ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಈ ವಿಷಯಗಳ ಕುರಿತು ಕನಿಷ್ಠ 3-4 ಗಂಟೆಗಳ ಕಾಲ ಈ ಕಾಯಿಲೆಗಳ ಕುರಿತು ವಿಶೇಷ ಸಭೆಯಲ್ಲಿ ಹಂಚಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ತರಬೇತಿಯನ್ನು ಪಡೆದ ಅಧಿಕಾರಿಗಳು ಗ್ರಾಮಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡುತ್ತಾರೆ ಎಂದು ಅವರು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೆಶಕ ನಟರಾಜ್, ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂಧನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಾದ ಡಾ.ಡೆವಿನ್ ಭಾಗಿಯಾಗಿದ್ದರು. ಈ ವೇಳೆ ಗ್ರಾಮ ಆರೋಗ್ಯ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ಡಾ.ಶಶಿಕುಮಾರ್ ಡಿ.ಜೆ, ಕೆ.ಎಚ್.ಪಿ.ಟಿ.ಯ ಶಶಿಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>