<p><strong>ಸುಂಟಿಕೊಪ್ಪ:</strong> ‘ಭಾರತದಿಂದ ವಿದೇಶಕ್ಕೆ ತೆರಳಬೇಕಾದರೆ ಕಾನೂನುಬದ್ಧ ಮೂಲ ದಾಖಲೆಗಳ ಅವಶ್ಯಕತೆ ಇದ್ದು, ಅದನ್ನು ಪರಿಶೀಲನೆ ನಡೆಸಿ ತಿರಸ್ಕರಿಸುವ ಮತ್ತು ಒಪ್ಪಿಕೊಳ್ಳುವ ಅಧಿಕಾರ ಪೊಲೀಸ್ ಇಲಾಖೆಗೆ ಸೇರಿದೆ’ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆ ಪಿಎಸ್ಐ ಚಂದ್ರಶೇಖರ್ ಹೇಳಿದರು.</p>.<p>ಇಲ್ಲಿನ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಪೊಲೀಸ್ ನಮ್ಮ ಸ್ನೇಹಿತ’ ಎಂಬ ವಿಷಯ ಕುರಿತು ಮಾತನಾಡಿದರು.</p>.<p>‘ವ್ಯಕ್ತಿಯ ಪಾಸ್ಪೋರ್ಟ್ ಪರಿಶೀಲನೆಗೆ ಬಂದಾಗ ಆತ ಯಾವುದಾದರೂ ಪ್ರಕರಣಗಳಲ್ಲಿ ಶಾಮೀಲಾಗಿದ್ದರೆ ಯಾವುದೇ ಪ್ರಭಾವಿಗಳ ಒತ್ತಡವಿದ್ದರೂ ಅದನ್ನು ಪುರಸ್ಕರಿಸಲು ಸಾಧ್ಯವಿಲ್ಲ. ಹಾಗಾಗಿ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಕಾಲೇಜಿನಲ್ಲಿ ಗುರುಗಳು ಕಲಿಸಿದ ಪಾಠವು ಔಪಚಾರಿಕವಾಗಿದ್ದರೆ, ನಾವು ಪರಿಸರದಲ್ಲಿ ಕಂಡುಕೊಳ್ಳುವ<br> ಹಲವು ಘಟನೆಗಳು ಅನೌಪಚಾರಿಕ ಶಿಕ್ಷಣವಾಗಿದೆ. ಕಾನೂನಿನ ಮಾರ್ಗದಲ್ಲಿ ಬದುಕು ಸಾಧಿಸಬೇಕು. ರಸ್ತೆ ದಾಟುವಾಗ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಕಾನೂನು ಪಾಲನೆ ಮಾಡಬೇಕು. ಪೊಲೀಸರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡರೆ ಸ್ನೇಹಿತರಂತೆ ಕಾಣುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ‘ಭಾರತದಿಂದ ವಿದೇಶಕ್ಕೆ ತೆರಳಬೇಕಾದರೆ ಕಾನೂನುಬದ್ಧ ಮೂಲ ದಾಖಲೆಗಳ ಅವಶ್ಯಕತೆ ಇದ್ದು, ಅದನ್ನು ಪರಿಶೀಲನೆ ನಡೆಸಿ ತಿರಸ್ಕರಿಸುವ ಮತ್ತು ಒಪ್ಪಿಕೊಳ್ಳುವ ಅಧಿಕಾರ ಪೊಲೀಸ್ ಇಲಾಖೆಗೆ ಸೇರಿದೆ’ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆ ಪಿಎಸ್ಐ ಚಂದ್ರಶೇಖರ್ ಹೇಳಿದರು.</p>.<p>ಇಲ್ಲಿನ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಪೊಲೀಸ್ ನಮ್ಮ ಸ್ನೇಹಿತ’ ಎಂಬ ವಿಷಯ ಕುರಿತು ಮಾತನಾಡಿದರು.</p>.<p>‘ವ್ಯಕ್ತಿಯ ಪಾಸ್ಪೋರ್ಟ್ ಪರಿಶೀಲನೆಗೆ ಬಂದಾಗ ಆತ ಯಾವುದಾದರೂ ಪ್ರಕರಣಗಳಲ್ಲಿ ಶಾಮೀಲಾಗಿದ್ದರೆ ಯಾವುದೇ ಪ್ರಭಾವಿಗಳ ಒತ್ತಡವಿದ್ದರೂ ಅದನ್ನು ಪುರಸ್ಕರಿಸಲು ಸಾಧ್ಯವಿಲ್ಲ. ಹಾಗಾಗಿ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಕಾಲೇಜಿನಲ್ಲಿ ಗುರುಗಳು ಕಲಿಸಿದ ಪಾಠವು ಔಪಚಾರಿಕವಾಗಿದ್ದರೆ, ನಾವು ಪರಿಸರದಲ್ಲಿ ಕಂಡುಕೊಳ್ಳುವ<br> ಹಲವು ಘಟನೆಗಳು ಅನೌಪಚಾರಿಕ ಶಿಕ್ಷಣವಾಗಿದೆ. ಕಾನೂನಿನ ಮಾರ್ಗದಲ್ಲಿ ಬದುಕು ಸಾಧಿಸಬೇಕು. ರಸ್ತೆ ದಾಟುವಾಗ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಕಾನೂನು ಪಾಲನೆ ಮಾಡಬೇಕು. ಪೊಲೀಸರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡರೆ ಸ್ನೇಹಿತರಂತೆ ಕಾಣುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>