<p><strong>ಮಡಿಕೇರಿ</strong>: ಬಿಜೆಪಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಹಜವಾಗಿ ಟಿಕೆಟ್ ವಂಚಿತರು ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಅಸಮಾಧಾನವನ್ನು ಹೋಗಲಾಡಿಸಲು ಈಗಾಗಲೇ ನಮ್ಮ ನಾಯಕರು ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು.</p><p>ಈಶ್ವರಪ್ಪ ಅವರಿಗೆ ಪಕ್ಷದಲ್ಲಿ ಜವಬ್ದಾರಿಯುತ ಸ್ಥಾನ ಇದೆ. ಅವರು ಕೂಡ ತಮ್ಮ ವೇದನೆ ಹೇಳಿಕೊಂಡಿದ್ದಾರೆ. ಅದನ್ನೂ ಕೂಡ ನಮ್ಮ ನಾಯರು ಸರಿಪಡಿಸುತ್ತಾರೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p><p>ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಹೇಳಿಕೆ ನಮಗೆ ಖುಷಿ ಕೊಟ್ಟಿದೆ.</p><p>ಮೂರನೇ ಬಾರಿಗೆ ಕಮಲ ಅರಳಬೇಕು, ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಗುರಿ ನಮ್ಮದು ಎಂದು ಅವರು ಹೇಳಿದರು.</p><p>ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಾರೆ. ಆದರೆ ಅದು ಸುಳ್ಳು. ಬಿಜೆಪಿ ಬಗ್ಗೆ ಆರೋಪ ಮಾಡುವ ದೊಡ್ಡದೊಂದು ಫ್ಯಾಕ್ಟರಿಯೇ ಇದೆ. ಅದರ ಕೆಲಸ ಕೇವಲ ಹುಸಿ ಆರೋಪಗಳನ್ನು ಮಾಡುವುದಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಬಿಜೆಪಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಹಜವಾಗಿ ಟಿಕೆಟ್ ವಂಚಿತರು ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಅಸಮಾಧಾನವನ್ನು ಹೋಗಲಾಡಿಸಲು ಈಗಾಗಲೇ ನಮ್ಮ ನಾಯಕರು ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು.</p><p>ಈಶ್ವರಪ್ಪ ಅವರಿಗೆ ಪಕ್ಷದಲ್ಲಿ ಜವಬ್ದಾರಿಯುತ ಸ್ಥಾನ ಇದೆ. ಅವರು ಕೂಡ ತಮ್ಮ ವೇದನೆ ಹೇಳಿಕೊಂಡಿದ್ದಾರೆ. ಅದನ್ನೂ ಕೂಡ ನಮ್ಮ ನಾಯರು ಸರಿಪಡಿಸುತ್ತಾರೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p><p>ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಹೇಳಿಕೆ ನಮಗೆ ಖುಷಿ ಕೊಟ್ಟಿದೆ.</p><p>ಮೂರನೇ ಬಾರಿಗೆ ಕಮಲ ಅರಳಬೇಕು, ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಗುರಿ ನಮ್ಮದು ಎಂದು ಅವರು ಹೇಳಿದರು.</p><p>ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಾರೆ. ಆದರೆ ಅದು ಸುಳ್ಳು. ಬಿಜೆಪಿ ಬಗ್ಗೆ ಆರೋಪ ಮಾಡುವ ದೊಡ್ಡದೊಂದು ಫ್ಯಾಕ್ಟರಿಯೇ ಇದೆ. ಅದರ ಕೆಲಸ ಕೇವಲ ಹುಸಿ ಆರೋಪಗಳನ್ನು ಮಾಡುವುದಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>