<p><strong>ಗೋಣಿಕೊಪ್ಪಲು:</strong> ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಡೀಕರಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿರುವುದು ಸಮರ್ಥನೀಯವಲ್’ಲ ಎಂದು ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ದೂರಿದ್ದಾರೆ.</p>.<p>‘ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು. ಆದರೆ ಅವೈಜ್ಞಾನಿಕವಾಗಿರುವ ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ ಬೀಳುತ್ತಿದೆ. ಇದನ್ನು ಸರಿದೂಗಿಸುವುದಕ್ಕಾಗಿ ಇಂಧನ ಬೆಲೆ ಹೆಚ್ಚಿಸಿರುವುದರಿಂದ ಜನ ಸಾಮಾನ್ಯರ ಮೇಲೆ ಹೊರೆ ಹೊರಿಸಿದಂತಾಗಿದೆ. ಇಂಧನ ಬೆಲೆ ಹೆಚ್ಚಳದಿಂದ ಸರಕು ಸಾಗಣೆ ದರ ಹೆಚ್ಚಾಗಿ ಎಲ್ಲ ವಸ್ತುಗಳ ಬೆಲೆಯೂ ಏರಲಿದೆ. ಈ ಕಾರಣದಿಂದ ಕೂಡಲೇ ಸರ್ಕಾರ ಇಂಧನ ಮೇಲಿನ ಹೆಚ್ಚುವರಿ ತೆರಿಗೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದರು.</p>.<p>‘ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಮಾನದಂಡ ನಿಗದಿಪಡಿಸಬೇಕು. ಉಳ್ಳವರು ಮತ್ತು ಇಲ್ಲದವರನ್ನು ಒಂದೇ ತಕ್ಕಡಿಯಲ್ಲಿ ತೂಗಬಾರದು. ಇದರಿಂದ ಸರ್ಕಾರದ ಹಣಕಾಸಿನ ಹೊರೆಯನ್ನು ತುಸು ತಗ್ಗಿಸಬಹುದು. ಇದನ್ನು ಬಿಟ್ಟು ಇಂಧನ ಮೇಲೆ ತೆರಿಗೆ ವಿಧಿಸುವುದು ಉತ್ತಮ ಬೆಳವಣಿಗೆಯಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಸಚಿವರು ಹೊರ ರಾಜ್ಯಗಳ ಬೆಲೆ ನೀಡಿ ಬೆಲೆ ಏರಿಕೆಯನ್ನು ಸಮರ್ಥಿಸಿ ಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಡೀಕರಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿರುವುದು ಸಮರ್ಥನೀಯವಲ್’ಲ ಎಂದು ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ದೂರಿದ್ದಾರೆ.</p>.<p>‘ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು. ಆದರೆ ಅವೈಜ್ಞಾನಿಕವಾಗಿರುವ ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ ಬೀಳುತ್ತಿದೆ. ಇದನ್ನು ಸರಿದೂಗಿಸುವುದಕ್ಕಾಗಿ ಇಂಧನ ಬೆಲೆ ಹೆಚ್ಚಿಸಿರುವುದರಿಂದ ಜನ ಸಾಮಾನ್ಯರ ಮೇಲೆ ಹೊರೆ ಹೊರಿಸಿದಂತಾಗಿದೆ. ಇಂಧನ ಬೆಲೆ ಹೆಚ್ಚಳದಿಂದ ಸರಕು ಸಾಗಣೆ ದರ ಹೆಚ್ಚಾಗಿ ಎಲ್ಲ ವಸ್ತುಗಳ ಬೆಲೆಯೂ ಏರಲಿದೆ. ಈ ಕಾರಣದಿಂದ ಕೂಡಲೇ ಸರ್ಕಾರ ಇಂಧನ ಮೇಲಿನ ಹೆಚ್ಚುವರಿ ತೆರಿಗೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದರು.</p>.<p>‘ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಮಾನದಂಡ ನಿಗದಿಪಡಿಸಬೇಕು. ಉಳ್ಳವರು ಮತ್ತು ಇಲ್ಲದವರನ್ನು ಒಂದೇ ತಕ್ಕಡಿಯಲ್ಲಿ ತೂಗಬಾರದು. ಇದರಿಂದ ಸರ್ಕಾರದ ಹಣಕಾಸಿನ ಹೊರೆಯನ್ನು ತುಸು ತಗ್ಗಿಸಬಹುದು. ಇದನ್ನು ಬಿಟ್ಟು ಇಂಧನ ಮೇಲೆ ತೆರಿಗೆ ವಿಧಿಸುವುದು ಉತ್ತಮ ಬೆಳವಣಿಗೆಯಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಸಚಿವರು ಹೊರ ರಾಜ್ಯಗಳ ಬೆಲೆ ನೀಡಿ ಬೆಲೆ ಏರಿಕೆಯನ್ನು ಸಮರ್ಥಿಸಿ ಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>