<p>ಪ್ರಜಾವಾಣಿ ವಾರ್ತೆ</p>.<p>ಮಡಿಕೇರಿ: ದೇಶದಾದ್ಯಂತ ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದು 24 ಲಕ್ಷ ವಿದ್ಯಾರ್ಥಿಗಳ ಕನಸು ನುಚ್ಚುನೂರಾಯಿತು. ಇವರ ಪರವಾಗಿ ಮೈಸೂರು– ಕೊಡಗು ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್ತಿನಲ್ಲಿ ಧ್ವನಿ ಎತ್ತುವರೇ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಪ್ರಶ್ನಿಸಿದರು.</p>.<p>‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ‘ನೀಟ್ ಪೇ ಚರ್ಚಾ’ ಕಾರ್ಯಕ್ರಮ ನಡೆಸಿ, ವಿದ್ಯಾರ್ಥಿಗಳ ಅಳಲು ಕೇಳಬೇಕು ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಯದುವೀರ್ ಅವರಿಗೆ ಕೊಡಗು ಜಿಲ್ಲೆಯವರೇ ಹೆಚ್ಚು ಮತ ಹಾಕಿದ್ದಾರೆ. ಆದರೆ, ಗೆದ್ದ ಬಳಿಕ ಅವರು ಒಮ್ಮೆಯೂ ಇಲ್ಲಿ ಬಂದು ಸುದ್ದಿಗೋಷ್ಠಿ ನಡೆಸಿ ಮತದಾರರಿಗೆ ಧನ್ಯವಾದ ಅರ್ಪಿಸಲಿಲ್ಲ. ಕನಿಷ್ಠ ಪಕ್ಷ ಕೊಡಗಿಗೆ ಅವರು ಏನು ಕೊಡುಗೆ ತರುತ್ತಾರೆ ಎನ್ನುವುದನ್ನಾದರೂ ಬಹಿರಂಗಪಡಿಸಲಿ’ ಎಂದು ಸವಾಲೆಸೆದರು.</p>.<p>‘ನಾನು ಸೋತಿದ್ದರೂ ಪ್ರತಿ ಶನಿವಾರ ಇಲ್ಲವೇ ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಲಭ್ಯ ಇರುತ್ತೇನೆ. ನನಗೆ ಮತ ಹಾಕಿದವರು, ಮತ ಹಾಕದೇ ಇರುವವರು ಬಂದು ತಮ್ಮ ಅಹವಾಲು ಸಲ್ಲಿಸಬಹುದು’ ಎಂದರು.</p>.<p>ಇಂಧನ ದರವನ್ನು ಲೀಟರ್ಗೆ ₹ 100ರ ಗಡಿ ದಾಟಿಸಿದವರು, ಇಂಧನದ ಮೇಲೆ 22 ಬಾರಿ ಸುಂಕ ಏರಿಕೆ ಮಾಡಿದವರು ಬಿಜೆಪಿಯವರು. ಈಗ ರಾಜ್ಯ ಸರ್ಕಾರ ಇಂಧನ ದರವನ್ನು ಒಮ್ಮೆ ಹೆಚ್ಚಿಸಿದ್ದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.</p>.<p>‘ಹಾಲಿನ ದರ ಏರಿಕೆ ಮಾಡಲಾಗಿದೆ. ಇದಕ್ಕೂ ಹಿಂದೆ ಹಾಲಿನ ದರ ಏರಿಕೆ ಮಾಡಿ ಎಷ್ಟು ದಿನಗಳಾಗಿತ್ತು ಎನ್ನುವುದನ್ನು ಪರಿಗಣಿಸಬೇಕು. ಹಾಲಿನ ದರ ಏರಿಕೆ ಮಾಡಿ ರೈತರಿಗೆ ನೀಡಲಾಗುವುದು. ನಾವು ನಮ್ಮ ರೈತರ ಹಿತ ಕಾಯುವುದು ಬೇಡವೇ’ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಕಾಂಗ್ರೆಸ್ ಸರ್ಕಾರ ಇದ್ದಾಗ ಆರಂಭವಾದ ಕಾರ್ಖಾನೆಗಳನ್ನು ಬಿಜೆಪಿ ಸರ್ಕಾರ ಒಂದೊಂದಾಗಿ ಮಾರಾಟ ಮಾಡುತ್ತಿದೆ. ಈಗ ಕೈಗಾರಿಕಾ ಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಈ ಕಾರ್ಖಾನೆಗಳನ್ನು ಸರ್ಕಾರದ ಸುಪರ್ದಿಯಲ್ಲೇ ಉಳಿಸಿಕೊಳ್ಳುತ್ತಾರಾ ಎಂದೂ ಪ್ರಶ್ನಿಸಿದರು.</p>.<p>ರಾಜ್ಯದಲ್ಲಿರುವ ಶಾಸಕರ ಪೈಕಿ ಅತಿ ಹೆಚ್ಚು ಕೆಲಸ ಮಾಡುತ್ತಿರುವ ಶಾಸಕ ಎ.ಎಸ್. ಪೊನ್ನಣ್ಣ. ಚುರುಕಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅವರ ಪ್ರತಿಕೃತಿ ಸುಡಲು ಬಿಜೆಪಿಯವರಿಗೆ ಮನಸ್ಸಾದರೂ ಹೇಗೆ ಬಂದಿತೋ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ನೀಡಬಾರದು ಎಂದು ಮನವಿ ಮಾಡಿದ್ದೆ. ಆದರೆ, ಮುಖ್ಯಮಂತ್ರಿ ಒಪ್ಪದೇ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ. ಯಾರು ಗ್ಯಾರಂಟಿ ಯೋಜನೆಗಳನ್ನು ಬೇಡ ಎನ್ನುತ್ತಿದ್ದಾರೋ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜನರು ಮತ ಹಾಕಿ ಗೆಲ್ಲಿಸಿದ್ದಾರೆ. ಇದು ಮತದಾರರ ಒಲವು ಎಂದು ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಬಿ.ಎಂ. ರಾಮು, ತೆನ್ನೀರಾ ಮೈನಾ, ಪುಷ್ಪಪೂಣಚ್ಚ, ಮಹೇಶ್, ಹಂಜ್ಹ ಭಾಗವಹಿಸಿದ್ದರು.</p>.<p> ಪ್ರತಿ ಮಂಗಳವಾರ ಇಲ್ಲವೇ ಶನಿವಾರ ಮಡಿಕೇರಿಯಲ್ಲಿರುವೆ ಮತ ಹಾಕಿದವರು, ಹಾಕದವರ ಅಹವಾಲು ಸಲ್ಲಿಸಲು ಕರೆ ಸೋತರು ಜನರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದ ಎಂ.ಲಕ್ಷ್ಮಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮಡಿಕೇರಿ: ದೇಶದಾದ್ಯಂತ ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದು 24 ಲಕ್ಷ ವಿದ್ಯಾರ್ಥಿಗಳ ಕನಸು ನುಚ್ಚುನೂರಾಯಿತು. ಇವರ ಪರವಾಗಿ ಮೈಸೂರು– ಕೊಡಗು ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್ತಿನಲ್ಲಿ ಧ್ವನಿ ಎತ್ತುವರೇ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಪ್ರಶ್ನಿಸಿದರು.</p>.<p>‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ‘ನೀಟ್ ಪೇ ಚರ್ಚಾ’ ಕಾರ್ಯಕ್ರಮ ನಡೆಸಿ, ವಿದ್ಯಾರ್ಥಿಗಳ ಅಳಲು ಕೇಳಬೇಕು ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಯದುವೀರ್ ಅವರಿಗೆ ಕೊಡಗು ಜಿಲ್ಲೆಯವರೇ ಹೆಚ್ಚು ಮತ ಹಾಕಿದ್ದಾರೆ. ಆದರೆ, ಗೆದ್ದ ಬಳಿಕ ಅವರು ಒಮ್ಮೆಯೂ ಇಲ್ಲಿ ಬಂದು ಸುದ್ದಿಗೋಷ್ಠಿ ನಡೆಸಿ ಮತದಾರರಿಗೆ ಧನ್ಯವಾದ ಅರ್ಪಿಸಲಿಲ್ಲ. ಕನಿಷ್ಠ ಪಕ್ಷ ಕೊಡಗಿಗೆ ಅವರು ಏನು ಕೊಡುಗೆ ತರುತ್ತಾರೆ ಎನ್ನುವುದನ್ನಾದರೂ ಬಹಿರಂಗಪಡಿಸಲಿ’ ಎಂದು ಸವಾಲೆಸೆದರು.</p>.<p>‘ನಾನು ಸೋತಿದ್ದರೂ ಪ್ರತಿ ಶನಿವಾರ ಇಲ್ಲವೇ ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಲಭ್ಯ ಇರುತ್ತೇನೆ. ನನಗೆ ಮತ ಹಾಕಿದವರು, ಮತ ಹಾಕದೇ ಇರುವವರು ಬಂದು ತಮ್ಮ ಅಹವಾಲು ಸಲ್ಲಿಸಬಹುದು’ ಎಂದರು.</p>.<p>ಇಂಧನ ದರವನ್ನು ಲೀಟರ್ಗೆ ₹ 100ರ ಗಡಿ ದಾಟಿಸಿದವರು, ಇಂಧನದ ಮೇಲೆ 22 ಬಾರಿ ಸುಂಕ ಏರಿಕೆ ಮಾಡಿದವರು ಬಿಜೆಪಿಯವರು. ಈಗ ರಾಜ್ಯ ಸರ್ಕಾರ ಇಂಧನ ದರವನ್ನು ಒಮ್ಮೆ ಹೆಚ್ಚಿಸಿದ್ದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.</p>.<p>‘ಹಾಲಿನ ದರ ಏರಿಕೆ ಮಾಡಲಾಗಿದೆ. ಇದಕ್ಕೂ ಹಿಂದೆ ಹಾಲಿನ ದರ ಏರಿಕೆ ಮಾಡಿ ಎಷ್ಟು ದಿನಗಳಾಗಿತ್ತು ಎನ್ನುವುದನ್ನು ಪರಿಗಣಿಸಬೇಕು. ಹಾಲಿನ ದರ ಏರಿಕೆ ಮಾಡಿ ರೈತರಿಗೆ ನೀಡಲಾಗುವುದು. ನಾವು ನಮ್ಮ ರೈತರ ಹಿತ ಕಾಯುವುದು ಬೇಡವೇ’ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಕಾಂಗ್ರೆಸ್ ಸರ್ಕಾರ ಇದ್ದಾಗ ಆರಂಭವಾದ ಕಾರ್ಖಾನೆಗಳನ್ನು ಬಿಜೆಪಿ ಸರ್ಕಾರ ಒಂದೊಂದಾಗಿ ಮಾರಾಟ ಮಾಡುತ್ತಿದೆ. ಈಗ ಕೈಗಾರಿಕಾ ಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಈ ಕಾರ್ಖಾನೆಗಳನ್ನು ಸರ್ಕಾರದ ಸುಪರ್ದಿಯಲ್ಲೇ ಉಳಿಸಿಕೊಳ್ಳುತ್ತಾರಾ ಎಂದೂ ಪ್ರಶ್ನಿಸಿದರು.</p>.<p>ರಾಜ್ಯದಲ್ಲಿರುವ ಶಾಸಕರ ಪೈಕಿ ಅತಿ ಹೆಚ್ಚು ಕೆಲಸ ಮಾಡುತ್ತಿರುವ ಶಾಸಕ ಎ.ಎಸ್. ಪೊನ್ನಣ್ಣ. ಚುರುಕಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅವರ ಪ್ರತಿಕೃತಿ ಸುಡಲು ಬಿಜೆಪಿಯವರಿಗೆ ಮನಸ್ಸಾದರೂ ಹೇಗೆ ಬಂದಿತೋ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ನೀಡಬಾರದು ಎಂದು ಮನವಿ ಮಾಡಿದ್ದೆ. ಆದರೆ, ಮುಖ್ಯಮಂತ್ರಿ ಒಪ್ಪದೇ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ. ಯಾರು ಗ್ಯಾರಂಟಿ ಯೋಜನೆಗಳನ್ನು ಬೇಡ ಎನ್ನುತ್ತಿದ್ದಾರೋ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜನರು ಮತ ಹಾಕಿ ಗೆಲ್ಲಿಸಿದ್ದಾರೆ. ಇದು ಮತದಾರರ ಒಲವು ಎಂದು ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಬಿ.ಎಂ. ರಾಮು, ತೆನ್ನೀರಾ ಮೈನಾ, ಪುಷ್ಪಪೂಣಚ್ಚ, ಮಹೇಶ್, ಹಂಜ್ಹ ಭಾಗವಹಿಸಿದ್ದರು.</p>.<p> ಪ್ರತಿ ಮಂಗಳವಾರ ಇಲ್ಲವೇ ಶನಿವಾರ ಮಡಿಕೇರಿಯಲ್ಲಿರುವೆ ಮತ ಹಾಕಿದವರು, ಹಾಕದವರ ಅಹವಾಲು ಸಲ್ಲಿಸಲು ಕರೆ ಸೋತರು ಜನರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದ ಎಂ.ಲಕ್ಷ್ಮಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>