<p>ಮಡಿಕೇರಿ: ಇಲ್ಲಿನ ಸಿದ್ದಾಪುರದ ಕಾವೇರಿ ಜಲಾನಯನ ಪ್ರದೇಶದಲ್ಲಿ 2,400 ಎಕರೆ ಕಾಫಿ ತೋಟವನ್ನು ಭೂಪರಿವರ್ತನೆ ಮಾಡಬಾರದು ಎಂದು ಕೋರಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಯುನೆಸ್ಕೊದ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.</p>.<p>‘ದೊಡ್ಡ ಪ್ರಮಾಣದಲ್ಲಿ ಕಾಫಿ ತೋಟವನ್ನು ಭೂಪರಿವರ್ತನೆ ಮಾಡಿ ಅಲ್ಲಿ ಉಪನಗರ, ಮಿನಿನಗರಗಳು ಹಾಗೂ ಬಡಾವಣೆಗಳು ನಿರ್ಮಾಣವಾದರೆ ಮುಂದೆ ಭಾರಿ ಉತ್ಪಾತಕ್ಕೆ ಕಾರಣವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಕಾಫಿ ತೋಟ ಭೂಪರಿವರ್ತನೆ ಮಾಡಿ ಅಲ್ಲಿ ಬಡಾವಣೆಗಳನ್ನು ನಿರ್ಮಿಸುವುದರಿಂದ ಸಾವಿರಾರು ಮರಗಳ ಹನನವಾಗುತ್ತದೆ; ಅಪೂರ್ವ ಜೀವವೈವಿಧ್ಯಗಳು ನಾಶವಾಗುತ್ತವೆ. ಹಸಿರು ಹೊದಿಕೆ ಇಲ್ಲವಾಗಿ ಪರಿಸರಕ್ಕೆ ತೊಂದರೆ ಆಗುತ್ತದೆ. ಹಲವು ತೊರೆಗಳು, ಜಲಮೂಲಗಳು ಬತ್ತಿ ಹೋಗಿ, ಅವು ಸೇರುವ ನದಿಗಳಲ್ಲಿ ನೀರು ಕಡಿಮೆಯಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎನ್.ಯು.ನಾಚಪ್ಪ, ‘ಪತ್ರವನ್ನು ಪ್ರಧಾನಮಂತ್ರಿ, ರಾಷ್ಟ್ರಪತಿ ಸೇರಿದಂತೆ ಸಂಬಂಧಪಟ್ಟವರಿಗೆ ರವಾನಿಸಲಾಗಿದೆ. ಸದ್ಯದಲ್ಲೇ ಪ್ರತಿಭಟನೆಯನ್ನೂ ನಡೆಸಿ ಗಮನಸೆಳೆಯಲಾಗುವುದು’ ಎಂದು ಹೇಳಿದರು.</p>.<p>‘ದೊಡ್ಡ ಪ್ರಮಾಣದಲ್ಲಿ ಭೂಪರಿವರ್ತನೆ ಕೋರಿ ಯಾವುದೇ ಅರ್ಜಿಗಳು ಬಂದಿಲ್ಲ’ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಇಲ್ಲಿನ ಸಿದ್ದಾಪುರದ ಕಾವೇರಿ ಜಲಾನಯನ ಪ್ರದೇಶದಲ್ಲಿ 2,400 ಎಕರೆ ಕಾಫಿ ತೋಟವನ್ನು ಭೂಪರಿವರ್ತನೆ ಮಾಡಬಾರದು ಎಂದು ಕೋರಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಯುನೆಸ್ಕೊದ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.</p>.<p>‘ದೊಡ್ಡ ಪ್ರಮಾಣದಲ್ಲಿ ಕಾಫಿ ತೋಟವನ್ನು ಭೂಪರಿವರ್ತನೆ ಮಾಡಿ ಅಲ್ಲಿ ಉಪನಗರ, ಮಿನಿನಗರಗಳು ಹಾಗೂ ಬಡಾವಣೆಗಳು ನಿರ್ಮಾಣವಾದರೆ ಮುಂದೆ ಭಾರಿ ಉತ್ಪಾತಕ್ಕೆ ಕಾರಣವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಕಾಫಿ ತೋಟ ಭೂಪರಿವರ್ತನೆ ಮಾಡಿ ಅಲ್ಲಿ ಬಡಾವಣೆಗಳನ್ನು ನಿರ್ಮಿಸುವುದರಿಂದ ಸಾವಿರಾರು ಮರಗಳ ಹನನವಾಗುತ್ತದೆ; ಅಪೂರ್ವ ಜೀವವೈವಿಧ್ಯಗಳು ನಾಶವಾಗುತ್ತವೆ. ಹಸಿರು ಹೊದಿಕೆ ಇಲ್ಲವಾಗಿ ಪರಿಸರಕ್ಕೆ ತೊಂದರೆ ಆಗುತ್ತದೆ. ಹಲವು ತೊರೆಗಳು, ಜಲಮೂಲಗಳು ಬತ್ತಿ ಹೋಗಿ, ಅವು ಸೇರುವ ನದಿಗಳಲ್ಲಿ ನೀರು ಕಡಿಮೆಯಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎನ್.ಯು.ನಾಚಪ್ಪ, ‘ಪತ್ರವನ್ನು ಪ್ರಧಾನಮಂತ್ರಿ, ರಾಷ್ಟ್ರಪತಿ ಸೇರಿದಂತೆ ಸಂಬಂಧಪಟ್ಟವರಿಗೆ ರವಾನಿಸಲಾಗಿದೆ. ಸದ್ಯದಲ್ಲೇ ಪ್ರತಿಭಟನೆಯನ್ನೂ ನಡೆಸಿ ಗಮನಸೆಳೆಯಲಾಗುವುದು’ ಎಂದು ಹೇಳಿದರು.</p>.<p>‘ದೊಡ್ಡ ಪ್ರಮಾಣದಲ್ಲಿ ಭೂಪರಿವರ್ತನೆ ಕೋರಿ ಯಾವುದೇ ಅರ್ಜಿಗಳು ಬಂದಿಲ್ಲ’ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>