ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಸಂವಿಧಾನ ಜಾಗೃತಿ ಜಾಥಾ: 2ನೇ ಹಂತದ ರಸಪ್ರಶ್ನೆ

Published 20 ಫೆಬ್ರುವರಿ 2024, 2:58 IST
Last Updated 20 ಫೆಬ್ರುವರಿ 2024, 2:58 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ’ದ ಅಂಗವಾಗಿ 2ನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬಹುದು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್‌ಲೈನ್‌ ಮೂಲಕ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಎರಡನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ.

ಇದರಲ್ಲಿ ಭಾಗಿಯಾಗಲು https://docs.google.com/forms/d/e/1FAIpQLSfgt_NhUOicIzuh3Z8Oo_ 8WIJnqMtDK8B9xRlFjT9nTHuJbJg/viewform?usp=sf_link ಈ ಲಿಂಕ್‌ನಲ್ಲಿರುವ ಗೂಗಲ್ ಫಾರ್ಮ್‌ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಿರುವ ಬಹು ಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT