ಮಡಿಕೇರಿ: ಕೊಡಗು ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ’ದ ಅಂಗವಾಗಿ 2ನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬಹುದು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್ಲೈನ್ ಮೂಲಕ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಎರಡನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ.
ಇದರಲ್ಲಿ ಭಾಗಿಯಾಗಲು https://docs.google.com/forms/d/e/1FAIpQLSfgt_NhUOicIzuh3Z8Oo_ 8WIJnqMtDK8B9xRlFjT9nTHuJbJg/viewform?usp=sf_link ಈ ಲಿಂಕ್ನಲ್ಲಿರುವ ಗೂಗಲ್ ಫಾರ್ಮ್ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಿರುವ ಬಹು ಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.