<p><strong>ವಿರಾಜಪೇಟೆ</strong>: ತಾಯಿಯನ್ನು ಕೊಲೆಗೈದ ಆರೋಪ ಸಾಬೀತಾದ ಕಾರಣ ಪುತ್ರನಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ನಿವಾಸಿ ಎಂ.ಕೆ. ದೇವಯ್ಯ (53) ಶಿಕ್ಷೆಗೆ ಗುರಿಯಾದ ಅಪರಾಧಿ.</p>.<p>ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ಎಂ.ಬಿ.ಕಾರ್ಯಪ್ಪ ಅವರ ಪತ್ನಿ ಕಾಮವ್ವ (83) ಅವರ ಮೃತದೇಹ 2020ರ ಡಿಸೆಂಬರ್ 3ರಂದು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಅವರ ಕಿರಿಯ ಪುತ್ರ ದೇವಯ್ಯ ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸಿಪಿಐ ಶ್ರೀಧರ್ ಕಾಮವ್ವ ಪುತ್ರ ದೇವಯ್ಯ ಅವರೇ ಕೊಲೆ ಮಾಡಿದ್ದರು ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೇವಯ್ಯಗೆ ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.</p>.<p>2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ನಟರಾಜು ತೀರ್ಪು ನೀಡಿದ್ದು, ಸರ್ಕಾರಿ ಅಭಿಯೋಜಕ ಯಾಸೀನ್ ಅಹಮ್ಮದ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ತಾಯಿಯನ್ನು ಕೊಲೆಗೈದ ಆರೋಪ ಸಾಬೀತಾದ ಕಾರಣ ಪುತ್ರನಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ನಿವಾಸಿ ಎಂ.ಕೆ. ದೇವಯ್ಯ (53) ಶಿಕ್ಷೆಗೆ ಗುರಿಯಾದ ಅಪರಾಧಿ.</p>.<p>ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ಎಂ.ಬಿ.ಕಾರ್ಯಪ್ಪ ಅವರ ಪತ್ನಿ ಕಾಮವ್ವ (83) ಅವರ ಮೃತದೇಹ 2020ರ ಡಿಸೆಂಬರ್ 3ರಂದು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಅವರ ಕಿರಿಯ ಪುತ್ರ ದೇವಯ್ಯ ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸಿಪಿಐ ಶ್ರೀಧರ್ ಕಾಮವ್ವ ಪುತ್ರ ದೇವಯ್ಯ ಅವರೇ ಕೊಲೆ ಮಾಡಿದ್ದರು ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೇವಯ್ಯಗೆ ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.</p>.<p>2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ನಟರಾಜು ತೀರ್ಪು ನೀಡಿದ್ದು, ಸರ್ಕಾರಿ ಅಭಿಯೋಜಕ ಯಾಸೀನ್ ಅಹಮ್ಮದ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>