‘ವಿದ್ಯುತ್ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಮಾಹಿತಿ ನೀಡಿದ್ದೆವು. ತಕ್ಷಣವೇ ಸ್ಥಳಕ್ಕೆ ಬಂದ ಯೋಗೇಶ್ ಕೆಲಸ ಆರಂಭಿಸಿದ್ದರು. ಆದರೆ, ಕಂಬವನ್ನೇರಿದ ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿ ಕೆಳಗೆ ಬಿದ್ದು ಸಾವನ್ನಪ್ಪಿದರು. ಅವರು ಉತ್ತಮ ಕೆಲಸಗಾರ. ಗ್ರಾಮಸ್ಥರ ಸಮಸ್ಯೆಗೆ ಸದಾ ಸ್ಪಂದಿಸುತ್ತಿದ್ದರು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.