<p>ಮಡಿಕೇರಿ: ‘ಇಲ್ಲಿನ ಪ್ರತಾಪಸಿಂಹ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಮಾಹಿತಿ ಮೊದಲೆ ಇತ್ತು. ನಾನೂ ಮೈಸೂರು– ಕೊಡಗು ಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ಆದರೆ, ನನಗೆ ನೀಡದೇ ರಾಜವಂಶಸ್ಥರಿಗೆ ನೀಡಿದರು’ ಎಂದು ಕೆಪಿಸಿಸಿ ವಕ್ತಾರೆ ತೇಜಸ್ವಿನಿಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜವಂಶಸ್ಥರು ನಮ್ಮ ಸಂಸ್ಕೃತಿಯ ಭಾಗ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ನಾವು ಗೌರವ ಕೊಡುತ್ತೇವೆ. ಅವರನ್ನು ಬಿಜೆಪಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪ್ರತಾಪಸಿಂಹ ಅವರ ಬೆಂಬಲಕ್ಕೆ ನಿಂತಿದ್ದ ವರಿಷ್ಠರು ಈಗ ಏಕೆ ಟಿಕೆಟ್ ನೀಡಲಿಲ್ಲ, ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಗೆ ಏಕೆ ಭಾರತರತ್ನ ಕೊಡಲಿಲ್ಲ, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದು ಏಕೆ ಎಂಬುದಕ್ಕೆ ಬಿಜೆಪಿ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಈಗ ಬಿಜೆಪಿ ಬದಲಾಗಿದೆ. ಬಿಜೆಪಿಗೆ ಉತ್ತಮ ಸಂಸದೀಯ ಪಟುಗಳು ಬೇಕಿಲ್ಲ. ಭ್ರಷ್ಟರು ಮತ್ತು ಕಾಳಸಂತೆಕೋರರೇ ಬೇಕಾಗಿದ್ದಾರೆ ಎಂದು ಕಿಡಿಕಾರಿದರು.</p>.<p>‘ಸಂಸತ್ತಿನಲ್ಲಿ ಮಾತನಾಡದೇ ಇರುವವರು ಬೇಕೋ, ಕೊಡಗಿನ ಸಮಸ್ಯೆಗಳನ್ನು ಸಮರ್ಥವಾಗಿ ಪ್ರಸ್ತಾಸಿ ಮಾತನಾಡುವವರೋ ಬೇಕೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು’ ಎಂದು ಹೇಳಿದರು.</p>.<p>ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ‘ಇನ್ನು ಮುಂದೆ ಸುಳ್ಳಿನ ವಿಚಾರಗಳಿಗೆ ಜನರು ಮನ್ನಣೆ ಕೊಡುವುದಿಲ್ಲ’ ಎಂದು ತಿಳಿಸಿದರು.</p>.<p>ತಾಳಿ ವಿಚಾರವನ್ನು ತರಲಾಗಿದೆ. ಆದರೆ, ವಾಸ್ತವದಲ್ಲಿ ಬೆಂಬಲ ಬೆಲೆ ಇಲ್ಲದೇ ಆತ್ಮಹತ್ಯೆ ಶರಣಾಗುವ ರೈತನ ಪತ್ನಿಯ ಹಾಗೂ ಕೆಲಸ ಇಲ್ಲದೇ ಪರಿತಪಿಸುವ ಕಾರ್ಮಿಕರ ಪತ್ನಿಯ ತಾಳಿಯ ಬಗ್ಗೆ ಗಂಭೀರವಾಗಿ ಚಿಂತಿಸಿದ್ದಾರೆಯೇ ಎಂದೂ ಪ್ರಶ್ನಿಸಿದರು.</p>.<p>‘ಗುರಿ ಇಟ್ಟ ಅಭ್ಯರ್ಥಿಗೆ ಮತ ನೀಡುತ್ತೀರೋ, ಗುರಿ ಇಲ್ಲದ ಅಭ್ಯರ್ಥಿಗೆ ಮತ ಹಾಕುತ್ತೀರೊ?’ ಎಂಬುದನ್ನು ಜನರೇ ನಿರ್ಧರಿಸಬೇಕು ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಪಕ್ಷದ ಮುಖಂಡರಾದ ವೀಣಾ ಅಚ್ಚಯ್ಯ, ಸುರಯ್ಯ ಅಬ್ರಾರ್, ಮಿನಾಜ್, ಮುನೀರ್ ಅಹಮ್ಮದ್, ತೆನ್ನೀರಾ ಮೈನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಇಲ್ಲಿನ ಪ್ರತಾಪಸಿಂಹ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಮಾಹಿತಿ ಮೊದಲೆ ಇತ್ತು. ನಾನೂ ಮೈಸೂರು– ಕೊಡಗು ಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ಆದರೆ, ನನಗೆ ನೀಡದೇ ರಾಜವಂಶಸ್ಥರಿಗೆ ನೀಡಿದರು’ ಎಂದು ಕೆಪಿಸಿಸಿ ವಕ್ತಾರೆ ತೇಜಸ್ವಿನಿಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜವಂಶಸ್ಥರು ನಮ್ಮ ಸಂಸ್ಕೃತಿಯ ಭಾಗ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ನಾವು ಗೌರವ ಕೊಡುತ್ತೇವೆ. ಅವರನ್ನು ಬಿಜೆಪಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪ್ರತಾಪಸಿಂಹ ಅವರ ಬೆಂಬಲಕ್ಕೆ ನಿಂತಿದ್ದ ವರಿಷ್ಠರು ಈಗ ಏಕೆ ಟಿಕೆಟ್ ನೀಡಲಿಲ್ಲ, ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಗೆ ಏಕೆ ಭಾರತರತ್ನ ಕೊಡಲಿಲ್ಲ, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದು ಏಕೆ ಎಂಬುದಕ್ಕೆ ಬಿಜೆಪಿ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಈಗ ಬಿಜೆಪಿ ಬದಲಾಗಿದೆ. ಬಿಜೆಪಿಗೆ ಉತ್ತಮ ಸಂಸದೀಯ ಪಟುಗಳು ಬೇಕಿಲ್ಲ. ಭ್ರಷ್ಟರು ಮತ್ತು ಕಾಳಸಂತೆಕೋರರೇ ಬೇಕಾಗಿದ್ದಾರೆ ಎಂದು ಕಿಡಿಕಾರಿದರು.</p>.<p>‘ಸಂಸತ್ತಿನಲ್ಲಿ ಮಾತನಾಡದೇ ಇರುವವರು ಬೇಕೋ, ಕೊಡಗಿನ ಸಮಸ್ಯೆಗಳನ್ನು ಸಮರ್ಥವಾಗಿ ಪ್ರಸ್ತಾಸಿ ಮಾತನಾಡುವವರೋ ಬೇಕೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು’ ಎಂದು ಹೇಳಿದರು.</p>.<p>ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ‘ಇನ್ನು ಮುಂದೆ ಸುಳ್ಳಿನ ವಿಚಾರಗಳಿಗೆ ಜನರು ಮನ್ನಣೆ ಕೊಡುವುದಿಲ್ಲ’ ಎಂದು ತಿಳಿಸಿದರು.</p>.<p>ತಾಳಿ ವಿಚಾರವನ್ನು ತರಲಾಗಿದೆ. ಆದರೆ, ವಾಸ್ತವದಲ್ಲಿ ಬೆಂಬಲ ಬೆಲೆ ಇಲ್ಲದೇ ಆತ್ಮಹತ್ಯೆ ಶರಣಾಗುವ ರೈತನ ಪತ್ನಿಯ ಹಾಗೂ ಕೆಲಸ ಇಲ್ಲದೇ ಪರಿತಪಿಸುವ ಕಾರ್ಮಿಕರ ಪತ್ನಿಯ ತಾಳಿಯ ಬಗ್ಗೆ ಗಂಭೀರವಾಗಿ ಚಿಂತಿಸಿದ್ದಾರೆಯೇ ಎಂದೂ ಪ್ರಶ್ನಿಸಿದರು.</p>.<p>‘ಗುರಿ ಇಟ್ಟ ಅಭ್ಯರ್ಥಿಗೆ ಮತ ನೀಡುತ್ತೀರೋ, ಗುರಿ ಇಲ್ಲದ ಅಭ್ಯರ್ಥಿಗೆ ಮತ ಹಾಕುತ್ತೀರೊ?’ ಎಂಬುದನ್ನು ಜನರೇ ನಿರ್ಧರಿಸಬೇಕು ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಪಕ್ಷದ ಮುಖಂಡರಾದ ವೀಣಾ ಅಚ್ಚಯ್ಯ, ಸುರಯ್ಯ ಅಬ್ರಾರ್, ಮಿನಾಜ್, ಮುನೀರ್ ಅಹಮ್ಮದ್, ತೆನ್ನೀರಾ ಮೈನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>