ನಿರಾಶ್ರಿತರಿಗೆ ಪರಿಹಾರ ಕೇಂದ್ರದಲ್ಲಿ ಕೈಗೊಂಡಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ವಿಶ್ವನಾಥ್ ಶೆಟ್ಟಿ, ಕೇಂದ್ರದಲ್ಲಿ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು ನಿರಾಶ್ರಿತ ಕುಟುಂಬಗಳಿಗೆ ಕೊಡಬೇಕು, ಮುಖ್ಯವಾಗಿ ಅಡುಗೆ ಅನಿಲ, ಆಹಾರ ಸಾಮಗ್ರಿಗಳು, ಬಟ್ಟೆ, ವೈದ್ಯಕೀಯ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಎಂದು ಸೂಚಿಸಿದರು.