<p><strong>ಮಡಿಕೇರಿ: </strong>ಮರ ಕಡಿಯುವುದಕ್ಕಾಗಿ ಸರ್ವೇ ಮಾಡಿಕೊಡಲು ಲಂಚದ ರೂಪದಲ್ಲಿ ₹ 2 ಸಾವಿರ ನಗದು ಹಾಗೂ ಮದ್ಯದ ಬಾಟಲಿ ಪಡೆಯುತ್ತಿದ್ದ ವೇಳೆ ಇಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಮಾದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.</p>.<p>‘ಬಿ.ಬಾಡಗ ಗ್ರಾಮದ ತೋಟದಲ್ಲಿರುವ 3 ಬೀಟೆ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಸರ್ವೇ ಮಾಡಿ ವರದಿ ನೀಡಲು ಮಾದಪ್ಪ ₹ 15 ಸಾವಿರ ಲಂಚವನ್ನು ದೂರುದಾರರಿಂದ ಮೊದಲೇ ಪಡೆದಿದ್ದರು. ಮತ್ತೆ ₹ 2 ಸಾವಿರ ಹಾಗೂ ಹಂಡ್ರೆಡ್ ಪೈಪರ್ ಅಥವಾ ಬ್ಲಾಕ್ ಡಾಗ್ ಮದ್ಯದ ಬಾಟಲಿ ನೀಡಲು ಒತ್ತಾಯಿಸಿದ್ದರು. ಇದರಿಂದ ಬೇಸರಗೊಂಡ ತೋಟದ ಮಾಲೀಕರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಮಂಗಳವಾರ ಸಂಜೆ ₹ 2 ಸಾವಿರ ನಗದು ಹಾಗೂ ಮದ್ಯದ ಬಾಟಲಿ ಪಡೆಯುವಾಗ ಮಾದಪ್ಪ ಅವರನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೈಸೂರು ಲೋಕಾಯುಕ್ತ ಎಸ್.ಪಿ. ಸುರೇಶ್ಬಾಬು, ಡಿವೈಎಸ್ಪಿ ಎಂ.ಎಸ್.ಪವನ್ಕುಮಾರ್, ಇನ್ಸ್ಪೆಕ್ಟರ್ ಲೋಕೇಶ್ ಕಾರ್ಯಾಚರಣೆಯಲ್ಲಿ ತಂಡದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಮರ ಕಡಿಯುವುದಕ್ಕಾಗಿ ಸರ್ವೇ ಮಾಡಿಕೊಡಲು ಲಂಚದ ರೂಪದಲ್ಲಿ ₹ 2 ಸಾವಿರ ನಗದು ಹಾಗೂ ಮದ್ಯದ ಬಾಟಲಿ ಪಡೆಯುತ್ತಿದ್ದ ವೇಳೆ ಇಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಮಾದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.</p>.<p>‘ಬಿ.ಬಾಡಗ ಗ್ರಾಮದ ತೋಟದಲ್ಲಿರುವ 3 ಬೀಟೆ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಸರ್ವೇ ಮಾಡಿ ವರದಿ ನೀಡಲು ಮಾದಪ್ಪ ₹ 15 ಸಾವಿರ ಲಂಚವನ್ನು ದೂರುದಾರರಿಂದ ಮೊದಲೇ ಪಡೆದಿದ್ದರು. ಮತ್ತೆ ₹ 2 ಸಾವಿರ ಹಾಗೂ ಹಂಡ್ರೆಡ್ ಪೈಪರ್ ಅಥವಾ ಬ್ಲಾಕ್ ಡಾಗ್ ಮದ್ಯದ ಬಾಟಲಿ ನೀಡಲು ಒತ್ತಾಯಿಸಿದ್ದರು. ಇದರಿಂದ ಬೇಸರಗೊಂಡ ತೋಟದ ಮಾಲೀಕರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಮಂಗಳವಾರ ಸಂಜೆ ₹ 2 ಸಾವಿರ ನಗದು ಹಾಗೂ ಮದ್ಯದ ಬಾಟಲಿ ಪಡೆಯುವಾಗ ಮಾದಪ್ಪ ಅವರನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೈಸೂರು ಲೋಕಾಯುಕ್ತ ಎಸ್.ಪಿ. ಸುರೇಶ್ಬಾಬು, ಡಿವೈಎಸ್ಪಿ ಎಂ.ಎಸ್.ಪವನ್ಕುಮಾರ್, ಇನ್ಸ್ಪೆಕ್ಟರ್ ಲೋಕೇಶ್ ಕಾರ್ಯಾಚರಣೆಯಲ್ಲಿ ತಂಡದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>