ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ ಲೋಕಾಯುಕ್ತ ಮೇಲೆ ದಾಳಿ

Published 27 ಮಾರ್ಚ್ 2024, 4:49 IST
Last Updated 27 ಮಾರ್ಚ್ 2024, 4:49 IST
ಅಕ್ಷರ ಗಾತ್ರ

ಮಡಿಕೇರಿ: ಲೋಕಾಯುಕ್ತ ಪೊಲೀಸರು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಜಯಣ್ಣ ಹಾಗೂ ಸಹಾಯಕ ಎಂಜಿನಿಯರ್ ಫಯಾಜ್ ಅಹಮ್ಮದ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಜಯಣ್ಣ ಅವರು ಈಗಷ್ಟೇ ಕಡಬ ತಾಲ್ಲೂಕಿಗೆ ವರ್ಗಾವಣೆಯಾಗಿದ್ದರು. ಕಡಬದಲ್ಲಿನ ಅವರ ಕಚೇರಿ, ಕುಶಾಲನಗರದಲ್ಲಿನ ಮನೆ ಮೇಲೆ ದಾಳಿ ನಡೆಸಲಾಗಿದೆ.

ಫಯಾಜ್ ಅಹಮ್ಮದ್ ಅವರ ಕುಶಾಲನಗರದಲ್ಲಿನ ಮನೆ, ಪಿರಿಯಾಪಟ್ಟಣದ ತೋಟದ ಮನೆ ಹಾಗೂ ಮಡಿಕೇರಿಯಲ್ಲಿನ ಅವರ ಸಂಬಂಧಿಕರ ಮ‌ನೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT