<p><strong>ಮಡಿಕೇರಿ:</strong> ‘ವಿದ್ಯಾರ್ಥಿಗಳು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಪತ್ರಿಕೆ ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಇಲ್ಲಿ ಕರೆ ನೀಡಿದರು.</p>.<p>ಮದೆನಾಡಿನ ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಪೋಷಕ-ವಿದ್ಯಾರ್ಥಿಗಳ ಸಭೆ ಹಾಗೂ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎನ್. ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಮಾತೃ ಭಾಷೆ ಪ್ರೀತಿಸುವುದರೊಂದಿಗೆ ಕನ್ನಡ ಭಾಷೆಗೆ ಗೌರವ ನೀಡಬೇಕು. ಸಾಹಿತ್ಯ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮಡಿಕೇರಿ ಡಿವೈಎಸ್ಪಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಶೋಕಿಗೋಸ್ಕರ ಕಾನೂನು ಉಲ್ಲಂಘನೆ ಮಾಡಬಾರದು. ಮಕ್ಕಳ ರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನುಗಳಿವೆ ಅವುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಉತ್ತಮ ಅವಕಾಶಗಳಿವೆ. ಸದುಪಯೋಗ ಪಡಿಸಿಕೊಳ್ಳಬೇಕು. ಓದಿನೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಸಲಹೆ ಮಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ. ಪ್ರೌಢಾವಸ್ಥೆಯು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಗೆ ಸಕಾಲ. ಈ ಹಂತದಲ್ಲಿ ಕಲಿಯುವ ವಿಚಾರಗಳು ಭವಿಷ್ಯದಲ್ಲಿ ನೆರವಾಗಲಿದೆ ಎಂದರು.</p>.<p>ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದರಿಂದ ಸಾಕಷ್ಟು ವಿಚಾರ ಮನನ ಮಾಡಿಕೊಳ್ಳಲು ಸಾಧ್ಯ. ಜೊತೆಯಲ್ಲಿ ಬರಹ, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಹೊರ ಪ್ರಪಂಚದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.</p>.<p>ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಅವರು, ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಸಿ.ಚೆನ್ನಪ್ಪ, ನಿರ್ದೇಶಕ ಹುಲಿಮನೆ ರಾಮಣ್ಣ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡೆ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ, ಪೋಷಕರ ಹಾಗೂ ವಿದ್ಯಾರ್ಥಿಗಳ ಸಭೆ ನಡೆಯಿತು. ವಿದ್ಯಾರ್ಥಿಗಳಾದ ಮೇಘನಾ, ಇಂಚರಾ, ಧನ್ಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕ ಪರಶುರಾಮ ನಿರೂಪಿಸಿದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ವಿದ್ಯಾರ್ಥಿಗಳು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಪತ್ರಿಕೆ ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಇಲ್ಲಿ ಕರೆ ನೀಡಿದರು.</p>.<p>ಮದೆನಾಡಿನ ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಪೋಷಕ-ವಿದ್ಯಾರ್ಥಿಗಳ ಸಭೆ ಹಾಗೂ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎನ್. ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಮಾತೃ ಭಾಷೆ ಪ್ರೀತಿಸುವುದರೊಂದಿಗೆ ಕನ್ನಡ ಭಾಷೆಗೆ ಗೌರವ ನೀಡಬೇಕು. ಸಾಹಿತ್ಯ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮಡಿಕೇರಿ ಡಿವೈಎಸ್ಪಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಶೋಕಿಗೋಸ್ಕರ ಕಾನೂನು ಉಲ್ಲಂಘನೆ ಮಾಡಬಾರದು. ಮಕ್ಕಳ ರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನುಗಳಿವೆ ಅವುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಉತ್ತಮ ಅವಕಾಶಗಳಿವೆ. ಸದುಪಯೋಗ ಪಡಿಸಿಕೊಳ್ಳಬೇಕು. ಓದಿನೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಸಲಹೆ ಮಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ. ಪ್ರೌಢಾವಸ್ಥೆಯು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಗೆ ಸಕಾಲ. ಈ ಹಂತದಲ್ಲಿ ಕಲಿಯುವ ವಿಚಾರಗಳು ಭವಿಷ್ಯದಲ್ಲಿ ನೆರವಾಗಲಿದೆ ಎಂದರು.</p>.<p>ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದರಿಂದ ಸಾಕಷ್ಟು ವಿಚಾರ ಮನನ ಮಾಡಿಕೊಳ್ಳಲು ಸಾಧ್ಯ. ಜೊತೆಯಲ್ಲಿ ಬರಹ, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಹೊರ ಪ್ರಪಂಚದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.</p>.<p>ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಅವರು, ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಸಿ.ಚೆನ್ನಪ್ಪ, ನಿರ್ದೇಶಕ ಹುಲಿಮನೆ ರಾಮಣ್ಣ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡೆ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ, ಪೋಷಕರ ಹಾಗೂ ವಿದ್ಯಾರ್ಥಿಗಳ ಸಭೆ ನಡೆಯಿತು. ವಿದ್ಯಾರ್ಥಿಗಳಾದ ಮೇಘನಾ, ಇಂಚರಾ, ಧನ್ಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕ ಪರಶುರಾಮ ನಿರೂಪಿಸಿದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>