<p><strong>ಕುಶಾಲನಗರ</strong>: ಕೆಪಿಟಿಸಿಎಲ್ ನೌಕರರು ವಿದ್ಯುತ್ ನಿರ್ವಹಣೆ ವೇಳೆ ಇಲಾಖೆ ನೀಡಿದ ಸುರಕ್ಷತಾ ಸಲಕರಣೆಗಳನ್ನು ಬಳಕೆ ಮಾಡಿ ವಿದ್ಯುತ್ ಅವಘಡದಿಂದ ಪಾರಾಗಲು ಸಾಧ್ಯ ಎಂದು ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಸಲಹೆ ನೀಡಿದರು.<br><br> ಇಲ್ಲಿನ ಸೆಸ್ಕ್ವಿಭಾಗೀಯ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ಸಂಘದ ಕುಶಾಲನಗರ ಪ್ರಾಥಮಿಕ ಸಮಿತಿ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೌಕರರು ಸಂಸ್ಥೆಯ ಏಳಿಗೆಗೆ ಶ್ರಮಿಸಬೇಕು ಎಂದರು.<br><br> ನೌಕರರು ಸಂಘಟಿತರಾಗುವ ಮೂಲಕ ನೂತನ ಸಂಘದ ಕಟ್ಟಡ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರ. ನೂತನ ಕಚೇರಿಗೆ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡುವುದಾಗಿ ರಾಮಚಂದ್ರ ಭರವಸೆ ನೀಡಿದರು.<br><br> ಕಚೇರಿಯನ್ನು ಉದ್ಘಾಟಿಸಿದ ಗೋಣಿಕೊಪ್ಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಮಾತನಾಡಿ, ಕೊಡಗಿನಲ್ಲಿರುವ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.</p>.<p>ಸೋಮವಾರಪೇಟೆ ವಿಭಾಗದ ವಿನಯ್ ಕುಮಾರ್, ಕುಶಾಲನಗರ ವಿಭಾಗದ ಮಂಜುನಾಥ್ ಹಾಗೂ ಸುರೇಶ್ ಮಾತನಾಡಿ, ಕೆಪಿಟಿಸಿಎಲ್ ನೌಕರರ ಸಂಘದ ಹಿತಕ್ಕಾಗಿ ಸಂಸ್ಥೆ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ರಾಜ್ಯ ಸಂಘದ ಮುಖಂರಾದ ಸಂದೀಪ್, ಸತ್ಯನಾರಾಯಣ, ಶರಣಬಸಪ್ಪ,ಮಹೇಶ್ ,ಕೃಷ್ಣರಾಜು ಮಾತನಾಡಿದರು.<br /> ಕುಶಾಲನಗರ ಸಮಿತಿ ಅಧ್ಯಕ್ಷ ಲವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನೌಕರರಾದ ಉಪೇಂದ್ರ,ದೇವರಾಜು,ಗೋವಿಂದರಾಜು ಅವರನ್ನು ಗೌರವಿಸಲಾಯಿತು.</p>.<p> ಮೈಸೂರು ಮುರಳಿಕೃಷ್ಣ, ಹಾಸನ ಸಂಘಟನಾ ಕಾರ್ಯದರ್ಶಿ ಪ್ರವೀಣ್ , ಮೈಸೂರು ವೆಂಕಟೇಶ,<br /> ಮಡಿಕೇರಿ ಸಮಿತಿ ಅಧ್ಯಕ್ಷ ಶಿವಾನಂದ, ಮಹಾದೇವಯ್ಯ ಕೊಳ್ಳೇಗಾಲ, ರತ್ನಯ್ಯ ಮಡಿಕೇರಿ,ಗಣೇಶ್,ಪ್ರಕಾಶ್, ಸಹಾಯಕ ಲೆಕ್ಕಾಧಿಕಾರಿ ಪ್ರದೀಪ್ ಮುಖಂಡರಾದ ಸೋಮೇಶ್, ರಾಣಿ, ಹೇಮಂತ್, ತೀರ್ಥಕುಮಾರ್, ಗೌರಿ ಶಂಕರ್, ರಮೇಶ್ ಸುಂಟಿಕೊಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಬಿ.ಕೃಷ್ಷರಾಜು, ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ವಸಂತ ರೈ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಕೆಪಿಟಿಸಿಎಲ್ ನೌಕರರು ವಿದ್ಯುತ್ ನಿರ್ವಹಣೆ ವೇಳೆ ಇಲಾಖೆ ನೀಡಿದ ಸುರಕ್ಷತಾ ಸಲಕರಣೆಗಳನ್ನು ಬಳಕೆ ಮಾಡಿ ವಿದ್ಯುತ್ ಅವಘಡದಿಂದ ಪಾರಾಗಲು ಸಾಧ್ಯ ಎಂದು ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಸಲಹೆ ನೀಡಿದರು.<br><br> ಇಲ್ಲಿನ ಸೆಸ್ಕ್ವಿಭಾಗೀಯ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ಸಂಘದ ಕುಶಾಲನಗರ ಪ್ರಾಥಮಿಕ ಸಮಿತಿ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೌಕರರು ಸಂಸ್ಥೆಯ ಏಳಿಗೆಗೆ ಶ್ರಮಿಸಬೇಕು ಎಂದರು.<br><br> ನೌಕರರು ಸಂಘಟಿತರಾಗುವ ಮೂಲಕ ನೂತನ ಸಂಘದ ಕಟ್ಟಡ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರ. ನೂತನ ಕಚೇರಿಗೆ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡುವುದಾಗಿ ರಾಮಚಂದ್ರ ಭರವಸೆ ನೀಡಿದರು.<br><br> ಕಚೇರಿಯನ್ನು ಉದ್ಘಾಟಿಸಿದ ಗೋಣಿಕೊಪ್ಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಮಾತನಾಡಿ, ಕೊಡಗಿನಲ್ಲಿರುವ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.</p>.<p>ಸೋಮವಾರಪೇಟೆ ವಿಭಾಗದ ವಿನಯ್ ಕುಮಾರ್, ಕುಶಾಲನಗರ ವಿಭಾಗದ ಮಂಜುನಾಥ್ ಹಾಗೂ ಸುರೇಶ್ ಮಾತನಾಡಿ, ಕೆಪಿಟಿಸಿಎಲ್ ನೌಕರರ ಸಂಘದ ಹಿತಕ್ಕಾಗಿ ಸಂಸ್ಥೆ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ರಾಜ್ಯ ಸಂಘದ ಮುಖಂರಾದ ಸಂದೀಪ್, ಸತ್ಯನಾರಾಯಣ, ಶರಣಬಸಪ್ಪ,ಮಹೇಶ್ ,ಕೃಷ್ಣರಾಜು ಮಾತನಾಡಿದರು.<br /> ಕುಶಾಲನಗರ ಸಮಿತಿ ಅಧ್ಯಕ್ಷ ಲವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನೌಕರರಾದ ಉಪೇಂದ್ರ,ದೇವರಾಜು,ಗೋವಿಂದರಾಜು ಅವರನ್ನು ಗೌರವಿಸಲಾಯಿತು.</p>.<p> ಮೈಸೂರು ಮುರಳಿಕೃಷ್ಣ, ಹಾಸನ ಸಂಘಟನಾ ಕಾರ್ಯದರ್ಶಿ ಪ್ರವೀಣ್ , ಮೈಸೂರು ವೆಂಕಟೇಶ,<br /> ಮಡಿಕೇರಿ ಸಮಿತಿ ಅಧ್ಯಕ್ಷ ಶಿವಾನಂದ, ಮಹಾದೇವಯ್ಯ ಕೊಳ್ಳೇಗಾಲ, ರತ್ನಯ್ಯ ಮಡಿಕೇರಿ,ಗಣೇಶ್,ಪ್ರಕಾಶ್, ಸಹಾಯಕ ಲೆಕ್ಕಾಧಿಕಾರಿ ಪ್ರದೀಪ್ ಮುಖಂಡರಾದ ಸೋಮೇಶ್, ರಾಣಿ, ಹೇಮಂತ್, ತೀರ್ಥಕುಮಾರ್, ಗೌರಿ ಶಂಕರ್, ರಮೇಶ್ ಸುಂಟಿಕೊಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಬಿ.ಕೃಷ್ಷರಾಜು, ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ವಸಂತ ರೈ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>