<p>ಮಡಿಕೇರಿ: ಇಲ್ಲಿನ ಗಾಂಧಿ ಭವನದಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಂಕರಯ್ಯ ಅವರು ಅಗ್ನಿಬನ್ನಿರಾಯ ಸ್ವಾಮಿ ಕುರಿತು ಮಾತನಾಡಿದರು.</p>.<p>ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಶ್ರೇಷ್ಠ ಗುರುಗಳು ಅಗ್ನಿಬನ್ನಿರಾಯರು. ಈ ಸಮಾಜದವರು ದುಡಿಮೆಗೆ ಹೆಚ್ಚಿನ ಆದ್ಯತೆ ನೀಡುವ ಶ್ರಮಜೀವಿಗಳು ಮಾತ್ರವಲ್ಲ ಕಾಯಕನಿಷ್ಠರೂ ಆಗಿದ್ದಾರೆ ಎಂದರು.</p>.<p>ಬೆಂಗಳೂರಿನಲ್ಲಿ ಲಾಲ್ಭಾಗ್ ಉದ್ಯಾನ ಸೇರಿದಂತೆ ಹಲವು ನಿರ್ಮಾಣ ಕಾರ್ಯದಲ್ಲಿ ಈ ಸಮುದಾಯವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರು ಆಚರಿಸುವ ಬೆಂಗಳೂರಿನ ಕರಗ ಸುಪ್ರಸಿದ್ಧವಾದುದು ಎಂದು ಹೇಳಿದರು.</p>.<p>ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-616685527</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಇಲ್ಲಿನ ಗಾಂಧಿ ಭವನದಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಂಕರಯ್ಯ ಅವರು ಅಗ್ನಿಬನ್ನಿರಾಯ ಸ್ವಾಮಿ ಕುರಿತು ಮಾತನಾಡಿದರು.</p>.<p>ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಶ್ರೇಷ್ಠ ಗುರುಗಳು ಅಗ್ನಿಬನ್ನಿರಾಯರು. ಈ ಸಮಾಜದವರು ದುಡಿಮೆಗೆ ಹೆಚ್ಚಿನ ಆದ್ಯತೆ ನೀಡುವ ಶ್ರಮಜೀವಿಗಳು ಮಾತ್ರವಲ್ಲ ಕಾಯಕನಿಷ್ಠರೂ ಆಗಿದ್ದಾರೆ ಎಂದರು.</p>.<p>ಬೆಂಗಳೂರಿನಲ್ಲಿ ಲಾಲ್ಭಾಗ್ ಉದ್ಯಾನ ಸೇರಿದಂತೆ ಹಲವು ನಿರ್ಮಾಣ ಕಾರ್ಯದಲ್ಲಿ ಈ ಸಮುದಾಯವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರು ಆಚರಿಸುವ ಬೆಂಗಳೂರಿನ ಕರಗ ಸುಪ್ರಸಿದ್ಧವಾದುದು ಎಂದು ಹೇಳಿದರು.</p>.<p>ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-616685527</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>