<p><strong>ಮಡಿಕೇರಿ</strong>: ಮಾಸಿಕ ಕನಿಷ್ಠ ₹ 10 ಸಾವಿರ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಧುಮುಕಿದ್ದಾರೆ.</p>.<p>ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ಜೊತೆ ಸಂಯೋಜಿತವಾಗಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸುಮಾರು 400ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದರು.</p>.<p>ಗಾಂಧಿ ಮೈದಾನದಿಂದ ಆರಂಭವಾದ ಮೆರವಣಿಗೆಯು ಬಾಲಭವನದವರೆಗೂ ನಡೆಯಿತು. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಈ ವೇಳೆ ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಭಾಗಿಯಾದ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ರಾಜ್ಯ ಸಮಿತಿ ಸದಸ್ಯ ಟಿ.ಆರ್.ಸುನಿಲ್, ‘ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಜನವರಿಯಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 10 ಸಾವಿರ ಗೌರವಧನ ನಿಶ್ಚಿತವಾಗಿ ಸಿಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈ ಭರವಸೆ ಇನ್ನೂ ಈಡೇರಿಲ್ಲ. ಹಾಗಾಗಿ, ಹೋರಾಟ ಮಾಡುವುದು ಅನಿವಾರ್ಯವಾಗಿದೆ’ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹ 10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ನಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ, ‘ರಾಜ್ಯ ಬಜೆಟ್ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು, ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಸುಮನಾ ಮಾತನಾಡಿ, ‘ಒಬ್ಬ ಆಶಾ ಕಾರ್ಯಕರ್ತೆಗೆ ಈಗ ಇರುವ ಜನಸಂಖ್ಯೆ ಮಿತಿಯನ್ನು ಹೆಚ್ಚಿಸಬಾರದು. ಈ ನೆಪದಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದು ಹಾಕಬಾರದು’ ಎಂದು ಮನವಿ ಮಾಡಿದರು.</p>.<p>ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಶಾಂತಿ ಮಾತನಾಡಿ, ‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನವನ್ನು ಅವೈಜ್ಞಾನಿಕವಾಗಿ ಮಾಡುವುದನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನನೊಂದಿಗೆ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.</p>.<p>ಇನ್ನೂ ಎರಡು ದಿನಗಳ ಕಾಲ ಬಾಲಭವನದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸಮಾವೇಶ ಮುಂದುವರಿಲಿದ್ದು, ಆ. 13ರಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ 14ರಂದು ಎಐಯುಟಿಯುಸಿಯ ರಾಜ್ಯ ಸಮಿತಿ ಸದಸ್ಯ ಬಿ.ರವಿ ಭಾಗವಹಿಸಲಿದ್ದಾರೆ.</p>.<p>ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ನಾಗಮಣಿ, ವಿರಾಜಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ವನಿತಾ, ಸೋಮವಾರಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಜ್ಯೋತಿ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಶ್ರೀಮತಿ, ಕಾರ್ಯದರ್ಶಿ ಸ್ವಾತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಮಾಸಿಕ ಕನಿಷ್ಠ ₹ 10 ಸಾವಿರ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಧುಮುಕಿದ್ದಾರೆ.</p>.<p>ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ಜೊತೆ ಸಂಯೋಜಿತವಾಗಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸುಮಾರು 400ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದರು.</p>.<p>ಗಾಂಧಿ ಮೈದಾನದಿಂದ ಆರಂಭವಾದ ಮೆರವಣಿಗೆಯು ಬಾಲಭವನದವರೆಗೂ ನಡೆಯಿತು. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಈ ವೇಳೆ ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಭಾಗಿಯಾದ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ರಾಜ್ಯ ಸಮಿತಿ ಸದಸ್ಯ ಟಿ.ಆರ್.ಸುನಿಲ್, ‘ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಜನವರಿಯಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 10 ಸಾವಿರ ಗೌರವಧನ ನಿಶ್ಚಿತವಾಗಿ ಸಿಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈ ಭರವಸೆ ಇನ್ನೂ ಈಡೇರಿಲ್ಲ. ಹಾಗಾಗಿ, ಹೋರಾಟ ಮಾಡುವುದು ಅನಿವಾರ್ಯವಾಗಿದೆ’ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹ 10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ನಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ, ‘ರಾಜ್ಯ ಬಜೆಟ್ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು, ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಸುಮನಾ ಮಾತನಾಡಿ, ‘ಒಬ್ಬ ಆಶಾ ಕಾರ್ಯಕರ್ತೆಗೆ ಈಗ ಇರುವ ಜನಸಂಖ್ಯೆ ಮಿತಿಯನ್ನು ಹೆಚ್ಚಿಸಬಾರದು. ಈ ನೆಪದಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದು ಹಾಕಬಾರದು’ ಎಂದು ಮನವಿ ಮಾಡಿದರು.</p>.<p>ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಶಾಂತಿ ಮಾತನಾಡಿ, ‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನವನ್ನು ಅವೈಜ್ಞಾನಿಕವಾಗಿ ಮಾಡುವುದನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನನೊಂದಿಗೆ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.</p>.<p>ಇನ್ನೂ ಎರಡು ದಿನಗಳ ಕಾಲ ಬಾಲಭವನದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸಮಾವೇಶ ಮುಂದುವರಿಲಿದ್ದು, ಆ. 13ರಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ 14ರಂದು ಎಐಯುಟಿಯುಸಿಯ ರಾಜ್ಯ ಸಮಿತಿ ಸದಸ್ಯ ಬಿ.ರವಿ ಭಾಗವಹಿಸಲಿದ್ದಾರೆ.</p>.<p>ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ನಾಗಮಣಿ, ವಿರಾಜಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ವನಿತಾ, ಸೋಮವಾರಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಜ್ಯೋತಿ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಶ್ರೀಮತಿ, ಕಾರ್ಯದರ್ಶಿ ಸ್ವಾತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>