ಒಂದು ವೇಳೆ ಭರವಸೆ ಹುಸಿಯಾದರೆ ಬಂದ್ ನಡೆಸುವುದು ಖಚಿತ. ಚೇಂಬರ್ ಆಫ್ ಕಾಮರ್ಸ್, ಆಟೊ ಮಾಲೀಕರ ಮತ್ತು ಚಾಲಕರ ಸಂಘ, ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘ, ಖಾಸಗಿ ಬಸ್ ಮಾಲೀಕರ ಮತ್ತು ಕಾರ್ಮಿಕರ ಸಂಘ ಸೇರಿದಂತೆ ಎಲ್ಲಾ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಕೋರಿ ಸಾರ್ವಜನಿಕರ ಬೆಂಬಲದೊಂದಿಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ ನಗರಸಭೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.