<p><strong>ಮಡಿಕೇರಿ</strong>: ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಆರು ಮಂದಿಯನ್ನು ಸಜೀವವಾಗಿ ದಹಿಸಿ ಪರಾರಿಯಾಗಿದ್ದ ಆರೋಪಿ ಬೋಜ (50) ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಮುಗುಟಗೇರಿ ಗ್ರಾಮದ ನರೇಶ್ ಅವರ ಕಾಫಿ ತೋಟದಲ್ಲಿ ಮೃತದೇಹ ಪತ್ತೆಯಾಗಿದ್ದು, ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p><strong>ಏನಿದು ಘಟನೆ?:</strong></p>.<p>ಮದ್ಯದ ಅಮಲಿನಲ್ಲಿದ್ದ ಬೋಜ, ತನ್ನ ಕುಟುಂಬದವರು ವಾಸವಾಗಿದ್ದ ಮನೆಗೇ ಶನಿವಾರ ನಸುಕಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಾಲ್ವರು ಮಕ್ಕಳು ಹಾಗೂ ಆರೋಪಿಯ ಪತ್ನಿಯೂ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದರು.</p>.<p>ಆರೋಪಿ ಬೋಜ ಹಾಗೂ ಆತನ ಪತ್ನಿ ಬೇಬಿ ನಡುವೆ ಗಲಾಟೆ ನಡೆದು ಅದರ ಸೇಡಿಗೆ ಕುಟುಂಬಸ್ಥರು ನಿದ್ರಿಸುತ್ತಿದ್ದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದ.</p>.<p><a href="https://www.prajavani.net/district/kodagu/patrol-poured-into-house-fire-three-killed-and-three-injured-in-madikeri-of-kodagu-818921.html" itemprop="url">ಪೆಟ್ರೋಲ್ ಸುರಿದು ಮನೆಗೆ ಬೆಂಕಿ: ಮೂವರ ಸಜೀವ ದಹನ, ಇಬ್ಬರ ಸ್ಥಿತಿ ಚಿಂತಾಜನಕ </a></p>.<p>ಆರೋಪಿಯ ಪತ್ನಿ ಬೇಬಿ (40), ಪಣಿ ಎರವರ ಸೀತೆ (45) ಹಾಗೂ ಮಕ್ಕಳಾದ ಪ್ರಾರ್ಥನಾ (6), ಪ್ರಕಾಶ್ (6), ವಿಶ್ವಾಸ್ (3) ಸೇರಿ ಆರು ಮಂದಿ ಮೃತಪಟ್ಟಿದ್ದರು. ಮಂಜು ಹಾಗೂ ತೋಲ ಅಪಾಯದಿಂದ ಪಾರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಆರು ಮಂದಿಯನ್ನು ಸಜೀವವಾಗಿ ದಹಿಸಿ ಪರಾರಿಯಾಗಿದ್ದ ಆರೋಪಿ ಬೋಜ (50) ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಮುಗುಟಗೇರಿ ಗ್ರಾಮದ ನರೇಶ್ ಅವರ ಕಾಫಿ ತೋಟದಲ್ಲಿ ಮೃತದೇಹ ಪತ್ತೆಯಾಗಿದ್ದು, ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p><strong>ಏನಿದು ಘಟನೆ?:</strong></p>.<p>ಮದ್ಯದ ಅಮಲಿನಲ್ಲಿದ್ದ ಬೋಜ, ತನ್ನ ಕುಟುಂಬದವರು ವಾಸವಾಗಿದ್ದ ಮನೆಗೇ ಶನಿವಾರ ನಸುಕಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಾಲ್ವರು ಮಕ್ಕಳು ಹಾಗೂ ಆರೋಪಿಯ ಪತ್ನಿಯೂ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದರು.</p>.<p>ಆರೋಪಿ ಬೋಜ ಹಾಗೂ ಆತನ ಪತ್ನಿ ಬೇಬಿ ನಡುವೆ ಗಲಾಟೆ ನಡೆದು ಅದರ ಸೇಡಿಗೆ ಕುಟುಂಬಸ್ಥರು ನಿದ್ರಿಸುತ್ತಿದ್ದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದ.</p>.<p><a href="https://www.prajavani.net/district/kodagu/patrol-poured-into-house-fire-three-killed-and-three-injured-in-madikeri-of-kodagu-818921.html" itemprop="url">ಪೆಟ್ರೋಲ್ ಸುರಿದು ಮನೆಗೆ ಬೆಂಕಿ: ಮೂವರ ಸಜೀವ ದಹನ, ಇಬ್ಬರ ಸ್ಥಿತಿ ಚಿಂತಾಜನಕ </a></p>.<p>ಆರೋಪಿಯ ಪತ್ನಿ ಬೇಬಿ (40), ಪಣಿ ಎರವರ ಸೀತೆ (45) ಹಾಗೂ ಮಕ್ಕಳಾದ ಪ್ರಾರ್ಥನಾ (6), ಪ್ರಕಾಶ್ (6), ವಿಶ್ವಾಸ್ (3) ಸೇರಿ ಆರು ಮಂದಿ ಮೃತಪಟ್ಟಿದ್ದರು. ಮಂಜು ಹಾಗೂ ತೋಲ ಅಪಾಯದಿಂದ ಪಾರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>