ಸಮೀಪದ ಪಂಪಿನಕೆರೆಯ ಬಳಿ ನಾಲ್ಕು ಶಕ್ತಿದೇವತೆಗಳಾದ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ಕುಂದೂರು ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮನ ಕರಗ ಹೊರಡಿಸುವ ಮೂಲಕ ನವರಾತ್ರಿ ಮಹೋತ್ಸವವು ವಿಧ್ಯುಕ್ತವಾಗಿ ಆರಂಭಗೊಂಡಿತು.
ಅ.8ರ ತನಕವೂ ಅರ್ಚಕರ ನೇತೃತ್ವದಲ್ಲಿ ಕರಗೋತ್ಸವವು ವಿವಿಧ ಬಡಾವಣೆಗಳಲ್ಲಿ ಸಂಚರಿಸಲಿದ್ದು, ಬಳಿಕ ಆಯಾ ದೇವಸ್ಥಾನಕ್ಕೆ ಕರಗಗಳು ಮರಳಲಿವೆ.