ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಪರಿಶೀಲನೆ

ಲೋಕಾಯುಕ್ತದ ಕಾರ್ಯಪಾಲಕ ಎಂಜಿನಿಯರ್ ತಂಡವನ್ನು ಪರಿಶೀಲನೆ
Published 19 ಜುಲೈ 2023, 4:52 IST
Last Updated 19 ಜುಲೈ 2023, 4:52 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ₹ 7 ಕೋಟಿ ಮೊತ್ತದ ತಡೆಗೋಡೆ ಕಾಮಗಾರಿ ಕುರಿತು ಲೋಕಾಯುಕ್ತದ ತಾಂತ್ರಿಕ ಸಮಿತಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ದೂರುದಾರ ತೆನ್ನೀರಾ ಮೈನಾ ಅವರೊಂದಿಗೆ ಬಂದ ಲೋಕಾಯುಕ್ತದ ಕಾರ್ಯಪಾಲಕ ಎಂಜಿನಿಯರ್‌ ರವಿಶಂಕರ್ ನೇತೃತ್ವದ ತಂಡವು ತಡೆಗೋಡೆಯ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಿತು. ಇವರೊಂದಿಗೆ ಲೋಕೋಪಯೋಗಿ ಇಲಾಖೆಯ ಗುಣಮಟ್ಟ ನಿಯಂತ್ರಕರ ತಂಡವೂ ಗುಣಮಟ್ಟವನ್ನು ಪರೀಕ್ಷಿಸಿತು.

ಕಾಂಗ್ರೆಸ್ ವಕ್ತಾರ ತೆನ್ನೀರಾ ಮೈನಾ ಅವರು ತಡೆಗೋಡೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT