ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅನೀಸ್ ಕಣ್ಮಣಿ ಜಾಯ್ ಅವರು, ‘ನಾನು ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಬಳಿಕ ಹಿಂದಿನ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರೇ ಮುಂದುವರಿಯಲಿ ಎಂಬ ಕೂಗು ಜಿಲ್ಲೆಯಲ್ಲಿ ಕೇಳಿಬಂದಿತ್ತು. ಹೀಗಾಗಿ, ಅಂದು ನನಗೆ ಸಾಕಷ್ಟು ಸವಾಲುಗಳು ಎದುರಿಗಿದ್ದವು, ಕ್ರಮೇಣ ಎಲ್ಲವೂ ಸರಿಯಾಯಿತು. ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಎಲ್ಲ ಇಲಾಖೆಯ ಅಧಿಕಾರಿಗಳೂ ಬೆಂಬಲವಾಗಿ ನಿಂತರು. ಅವರ ಸಹಕಾರದಿಂದ ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಖುಷಿ ನೀಡಿದೆ’ ಎಂದು ಹೇಳಿದರು.