<p><strong>ಮಡಿಕೇರಿ:</strong> ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ)ಯಲ್ಲಿನ ಸಾಲು ಸಾಲು ಸಮಸ್ಯೆಗಳನ್ನು ಆಲಿಸಿದ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಅವರು ಎಲ್ಲದಕ್ಕೂ ಪರಿಹಾರದ ಭರವಸೆಗಳನ್ನು ನೀಡಿದರು.</p>.<p>ಇಲ್ಲಿನ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯವಾಗಿ, ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸರಿಯಾಗಿ ವರ್ತಿಸುವುದಿಲ್ಲ ಎಂಬ ದೂರಿಗೆ ಪ್ರತಿಕ್ರಿಯಿಸಿದ ಅವರು, ಜನಸ್ನೇಹಿಯಾಗಿ ವರ್ತಿಸುವಂತೆ ಮಾಡಲು ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಹೇಳಿದರು.</p>.<p>ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುವುದಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಪರಿಹಾರಕ್ಕೆ ಸಹಾಯ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಸ್ಪತ್ರೆ ಆವರಣದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸಲಾಗುವುದು. ಹೊರ ಆವರಣವನ್ನು ಬಳಸಿಕೊಂಡು ವ್ಯವಸ್ಥಿತವಾಗಿ ವಾಹನ ನಿಲುಗಡೆಗೆ ಯೋಜನೆ ರೂಪಿಸಲಾಗುವುದು. ಐಬಿ ಬಳಿ ಜಿಲ್ಲಾಸ್ಪತ್ರೆಗೆ ಸೇರಿದ ಜಾಗವಿದ್ದು, ಅಲ್ಲಿಯೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.</p>.<p>ಸ್ಥಾನೀಯ ವೈದ್ಯಾಧಿಕಾರಿ ಡಾ.ಧನಂಜಯ ಕುಮಾರ್ ಮಾತನಾಡಿ, ‘ದೂರುಗಳಿದ್ದರೆ ತಕ್ಷಣ ಗಮನಕ್ಕೆ ತಂದರೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ಆರೋಗ್ಯಕರ ಚರ್ಚೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಬೇಕೆಂಬುದು ಸಂವಾದದ ಆಶಯವಾಗಿದೆ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ)ಯಲ್ಲಿನ ಸಾಲು ಸಾಲು ಸಮಸ್ಯೆಗಳನ್ನು ಆಲಿಸಿದ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಅವರು ಎಲ್ಲದಕ್ಕೂ ಪರಿಹಾರದ ಭರವಸೆಗಳನ್ನು ನೀಡಿದರು.</p>.<p>ಇಲ್ಲಿನ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯವಾಗಿ, ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸರಿಯಾಗಿ ವರ್ತಿಸುವುದಿಲ್ಲ ಎಂಬ ದೂರಿಗೆ ಪ್ರತಿಕ್ರಿಯಿಸಿದ ಅವರು, ಜನಸ್ನೇಹಿಯಾಗಿ ವರ್ತಿಸುವಂತೆ ಮಾಡಲು ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಹೇಳಿದರು.</p>.<p>ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುವುದಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಪರಿಹಾರಕ್ಕೆ ಸಹಾಯ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಸ್ಪತ್ರೆ ಆವರಣದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸಲಾಗುವುದು. ಹೊರ ಆವರಣವನ್ನು ಬಳಸಿಕೊಂಡು ವ್ಯವಸ್ಥಿತವಾಗಿ ವಾಹನ ನಿಲುಗಡೆಗೆ ಯೋಜನೆ ರೂಪಿಸಲಾಗುವುದು. ಐಬಿ ಬಳಿ ಜಿಲ್ಲಾಸ್ಪತ್ರೆಗೆ ಸೇರಿದ ಜಾಗವಿದ್ದು, ಅಲ್ಲಿಯೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.</p>.<p>ಸ್ಥಾನೀಯ ವೈದ್ಯಾಧಿಕಾರಿ ಡಾ.ಧನಂಜಯ ಕುಮಾರ್ ಮಾತನಾಡಿ, ‘ದೂರುಗಳಿದ್ದರೆ ತಕ್ಷಣ ಗಮನಕ್ಕೆ ತಂದರೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ಆರೋಗ್ಯಕರ ಚರ್ಚೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಬೇಕೆಂಬುದು ಸಂವಾದದ ಆಶಯವಾಗಿದೆ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>