ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮಾತನಾಡಿದ ಅವರು, ‘ನೂತನ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮೊದಲ ಬಾರಿ ಜಿಲ್ಲಾ ಸಮ್ಮೇಳನ ನಡೆಯುತ್ತಿದ್ದು, ಇದು ಕನ್ನಡಿಗರ ಹಬ್ಬವಾಗಿದೆ. ಎಲ್ಲಾ ಸಂಘ ಸಂಸ್ಥೆಗಳ, ಸಮುದಾಯಗಳ, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಕನ್ನಡ ಅಭಿಮಾನಿಗಳು, ಸರ್ಕಾರಿ ಅಧಿಕಾರಿಗಳು ಸೇರಿ ಉತ್ತಮವಾದಂತಹ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂದೇಶ ನೀಡುವಂತಹ ಸಮ್ಮೇಳನ ಇದಾಗಬೇಕು’ ಎಂದು ಹೇಳಿದರು.