2014ರಲ್ಲಿ ಕೊಡಗು ಜಿಲ್ಲಾಧಿಕಾರಿ ಆಗಿದ್ದ ಅನುರಾಗ್ ತಿವಾರಿ ಅವರು ಹಿಂದಿನ ಪುರಾತತ್ವ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಐತಿಹಾಸಿಕ ಸ್ಮಾರಕ ಸಂರಕ್ಷಣೆಗೆ ಮೊದಲ ಹೆಜ್ಜೆ ಇಟ್ಟಿದ್ದರು. ನಂತರ, ಅವರು ವರ್ಗಾವಣೆಗೊಂಡ ಬಳಿಕ, ಆ ಆಲೋಚನೆ ನನೆಗುದಿಗೆ ಬಿದ್ದಿತ್ತು. ಈಗ ಆ ಯೋಜನೆಗೆ ಚಾಲನೆ ಸಿಕ್ಕಿದೆ.