<p><strong>ಮಡಿಕೇರಿ</strong>: ನಗರದ ಕೆಎಸ್ಆರ್ಟಿಸಿ ಬಸ್ ಡಿಪೊ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ, ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶನಿವಾರ ರಾತ್ರಿ ವೈಭವೋಪೇತವಾಗಿ ಜರುಗಿತು.</p><p>ಪಡುವಣದಲ್ಲಿ ಸೂರ್ಯ ಅಸ್ತಮಿಸುತ್ತಿದ್ದಂತೆ ಆರಂಭವಾದ ಭವ್ಯ ಶೋಭಾಯಾತ್ರೆಗೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಸಾಕ್ಷಿಯಾಯಿತು. ಚಲನವಲನಗಳನ್ನು ಒಳಗೊಂಡ ಅದ್ದೂರಿ ಮಂಟಪ ಸೂಜಿಗಲ್ಲಿನಂತೆ ಸೆಳೆಯಿತು.</p><p>‘ಲೋಕಕಲ್ಯಾಣಕ್ಕಾಗಿ ಮಹಾಗಣಪತಿಯಿಂದ ದೈತ್ಯ ಶತಮಹಿಷಿಯ ಸಂಹಾರ’ ಕಥಾಹಂದರವನ್ನು ಮಂಟಪದಲ್ಲಿ ಪ್ರದರ್ಶಿಸಲಾಯಿತು. ಪೌರಾಣಿಕ ಹಿನ್ನೆಲೆಯ ಈ ಪ್ರದರ್ಶನವು ಸೂಜಿಗಲ್ಲಿನಂತೆ ಸೆಳೆಯಿತು.</p><p>ಶಾಂತಿನಿಕೇತನ ಬಡಾವಣೆ, ಡಿಪೊ ಬಳಿ, ಜನರಲ್ ತಿಮಯ್ಯ ವೃತ್ತ, ನಗರ ಪೊಲೀಸ್ ಠಾಣೆ ಮುಂಭಾಗ, ಹಳೆ ಖಾಸಗಿ ಬಸ್ನಿಲ್ದಾಣ, ಇಂದಿರಾಗಾಂಧಿ ವೃತ್ತ (ಚೌಕಿ), ಚೌಡೇಶ್ವರಿ ದೇವಾಲಯ ಬಳಿ ಹೀಗೆ ಅನೇಕ ಕಡೆ ಪ್ರದರ್ಶನಗಳು ನಡೆದವು.</p><p>ವಿವಿಧ ಹಾಡುಗಳಿಗೆ ಯುವಜನರು ಕುಣಿದು ಕುಪ್ಪಳಿಸಿದರು. ಕೇಸರಿ ಧ್ವಜವನಿಡಿದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಗರದ ಕೆಎಸ್ಆರ್ಟಿಸಿ ಬಸ್ ಡಿಪೊ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ, ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶನಿವಾರ ರಾತ್ರಿ ವೈಭವೋಪೇತವಾಗಿ ಜರುಗಿತು.</p><p>ಪಡುವಣದಲ್ಲಿ ಸೂರ್ಯ ಅಸ್ತಮಿಸುತ್ತಿದ್ದಂತೆ ಆರಂಭವಾದ ಭವ್ಯ ಶೋಭಾಯಾತ್ರೆಗೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಸಾಕ್ಷಿಯಾಯಿತು. ಚಲನವಲನಗಳನ್ನು ಒಳಗೊಂಡ ಅದ್ದೂರಿ ಮಂಟಪ ಸೂಜಿಗಲ್ಲಿನಂತೆ ಸೆಳೆಯಿತು.</p><p>‘ಲೋಕಕಲ್ಯಾಣಕ್ಕಾಗಿ ಮಹಾಗಣಪತಿಯಿಂದ ದೈತ್ಯ ಶತಮಹಿಷಿಯ ಸಂಹಾರ’ ಕಥಾಹಂದರವನ್ನು ಮಂಟಪದಲ್ಲಿ ಪ್ರದರ್ಶಿಸಲಾಯಿತು. ಪೌರಾಣಿಕ ಹಿನ್ನೆಲೆಯ ಈ ಪ್ರದರ್ಶನವು ಸೂಜಿಗಲ್ಲಿನಂತೆ ಸೆಳೆಯಿತು.</p><p>ಶಾಂತಿನಿಕೇತನ ಬಡಾವಣೆ, ಡಿಪೊ ಬಳಿ, ಜನರಲ್ ತಿಮಯ್ಯ ವೃತ್ತ, ನಗರ ಪೊಲೀಸ್ ಠಾಣೆ ಮುಂಭಾಗ, ಹಳೆ ಖಾಸಗಿ ಬಸ್ನಿಲ್ದಾಣ, ಇಂದಿರಾಗಾಂಧಿ ವೃತ್ತ (ಚೌಕಿ), ಚೌಡೇಶ್ವರಿ ದೇವಾಲಯ ಬಳಿ ಹೀಗೆ ಅನೇಕ ಕಡೆ ಪ್ರದರ್ಶನಗಳು ನಡೆದವು.</p><p>ವಿವಿಧ ಹಾಡುಗಳಿಗೆ ಯುವಜನರು ಕುಣಿದು ಕುಪ್ಪಳಿಸಿದರು. ಕೇಸರಿ ಧ್ವಜವನಿಡಿದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>