<p><strong>ಮಡಿಕೇರಿ</strong>: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಈಗ ಮತ್ತೆ ಚುರುಕಾಗಿದೆ. ಮಡಿಕೇರಿ ನಗರದಲ್ಲಿ ಮುಂಗಾರು ಶುಕ್ರವಾರ ಅಬ್ಬರಿಸಲಾರಂಭಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲ್ಲೂಕಿನ ಮದೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಸಂಜೆಯವರೆಗೆ 8 ಸೆಂ.ಮೀಗೂ ಅಧಿಕ ಮಳೆ ದಾಖಲಾಗಿತ್ತು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.</p>.<p>ಗುರುವಾರ ತಡರಾತ್ರಿಯಿಂದಲೇ ಮಳೆ ಮತ್ತು ಗಾಳಿ ಬಿರುಸಾಗಿತ್ತು. ಶುಕ್ರವಾರ ದಿನವಿಡೀ ಮಳೆ ಸುರಿಯಿತು. ಶೀತಗಾಳಿಯಿಂದ ಜನರು ಅಕ್ಷರಶಃ ನಡುಗಿದರು.</p>.<p>ಮಡಿಕೇರಿ ನಗರದಲ್ಲಿ ಶುಕ್ರವಾರ ಸಂತೆ ಇದ್ದುದ್ದರಿಂದ ಹಾಗೂ ರಜೆಯೂ ಇದ್ದುದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿಗಾಗಿ ಬಂದಿದ್ದರು. ಆದರೆ, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿದ ಅವರು ಪರದಾಡಿದರು.</p>.<p>ಮಾರುಕಟ್ಟೆಯ ಸುತ್ತಮುತ್ತ ಹಾಗೂ ಮಹದೇವಪೇಟೆಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಶುಕ್ರವಾರ ರಾತ್ರಿಯಾದರೂ ಮಡಿಕೇರಿಯಲ್ಲಿ ಮಳೆ ಬಿರುಸಾಗಿಯೇ ಸುರಿಯುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಈಗ ಮತ್ತೆ ಚುರುಕಾಗಿದೆ. ಮಡಿಕೇರಿ ನಗರದಲ್ಲಿ ಮುಂಗಾರು ಶುಕ್ರವಾರ ಅಬ್ಬರಿಸಲಾರಂಭಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲ್ಲೂಕಿನ ಮದೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಸಂಜೆಯವರೆಗೆ 8 ಸೆಂ.ಮೀಗೂ ಅಧಿಕ ಮಳೆ ದಾಖಲಾಗಿತ್ತು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.</p>.<p>ಗುರುವಾರ ತಡರಾತ್ರಿಯಿಂದಲೇ ಮಳೆ ಮತ್ತು ಗಾಳಿ ಬಿರುಸಾಗಿತ್ತು. ಶುಕ್ರವಾರ ದಿನವಿಡೀ ಮಳೆ ಸುರಿಯಿತು. ಶೀತಗಾಳಿಯಿಂದ ಜನರು ಅಕ್ಷರಶಃ ನಡುಗಿದರು.</p>.<p>ಮಡಿಕೇರಿ ನಗರದಲ್ಲಿ ಶುಕ್ರವಾರ ಸಂತೆ ಇದ್ದುದ್ದರಿಂದ ಹಾಗೂ ರಜೆಯೂ ಇದ್ದುದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿಗಾಗಿ ಬಂದಿದ್ದರು. ಆದರೆ, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿದ ಅವರು ಪರದಾಡಿದರು.</p>.<p>ಮಾರುಕಟ್ಟೆಯ ಸುತ್ತಮುತ್ತ ಹಾಗೂ ಮಹದೇವಪೇಟೆಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಶುಕ್ರವಾರ ರಾತ್ರಿಯಾದರೂ ಮಡಿಕೇರಿಯಲ್ಲಿ ಮಳೆ ಬಿರುಸಾಗಿಯೇ ಸುರಿಯುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>