<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ 8ರಿಂದ ಮೂರು ದಿನಗಳ ಕಾಲ ಪಾಸ್ಪೋರ್ಟ್ ಮೇಳ ನಡೆಯಲಿದೆ.</p>.<p>ಕಳೆದ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.</p>.<p>ಕೊಡಗು ಜಿಲ್ಲೆಯ ಹಲವು ಮಂದಿ ಪಾಸ್ಪೋರ್ಟ್ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಅವರು ಮನವಿಯಲ್ಲಿ ವಿವರಿಸಿದ್ದರು.</p>.<p>ಜೊತೆಗೆ, ಕಳೆದ ಬಾರಿ ನವದೆಹಲಿಗೆ ತೆರಳಿದ್ದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಶ್ರೀಪ್ರಿಯಾ ರಂಗನಾಥನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲೂ ಮನವಿ ಸಲ್ಲಿಸಿದ್ದರು.</p>.<p>ಇದಕ್ಕೆ ಸ್ಪಂದಿಸಿರುವ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗಳು ‘ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಹಾಗೂ 8 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಬೇಕು’ ಎಂದು ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತ್ಯುತ್ತರ ಕಳುಹಿಸಿದ್ದಾರೆ.</p>.<p>ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ 8ರಿಂದ ಮೂರು ದಿನಗಳ ಕಾಲ ಪಾಸ್ಪೋರ್ಟ್ ಮೇಳ ನಡೆಯಲಿದೆ.</p>.<p>ಕಳೆದ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.</p>.<p>ಕೊಡಗು ಜಿಲ್ಲೆಯ ಹಲವು ಮಂದಿ ಪಾಸ್ಪೋರ್ಟ್ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಅವರು ಮನವಿಯಲ್ಲಿ ವಿವರಿಸಿದ್ದರು.</p>.<p>ಜೊತೆಗೆ, ಕಳೆದ ಬಾರಿ ನವದೆಹಲಿಗೆ ತೆರಳಿದ್ದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಶ್ರೀಪ್ರಿಯಾ ರಂಗನಾಥನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲೂ ಮನವಿ ಸಲ್ಲಿಸಿದ್ದರು.</p>.<p>ಇದಕ್ಕೆ ಸ್ಪಂದಿಸಿರುವ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗಳು ‘ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಹಾಗೂ 8 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಬೇಕು’ ಎಂದು ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತ್ಯುತ್ತರ ಕಳುಹಿಸಿದ್ದಾರೆ.</p>.<p>ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>