ಮಡಿಕೇರಿ: ಇಲ್ಲಿನ ಸ್ಟುವರ್ಟ್ ಹಿಲ್ ಸಮೀಪ ಕಟ್ಟಡ ನಿರ್ಮಾಣ ಹಂತದ ಕಾಮಗಾರಿ ವೇಳೆ ಮಣ್ಣು ಕುಸಿದು ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಗೊಂಡ ಇಬ್ಬರು ಕಾರ್ಮಿಕರ ಆರೋಗ್ಯವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಘಟನೆ ಸಂಭವಿಸಲು ನಿರ್ಲಕ್ಷ್ಯವೇ ಕಾರಣವಾಗಿದ್ದು, ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದರು.
ಇದಕ್ಕೂ ಮುನ್ನ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.