ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ಸ್ಥಳದಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ಯಾವುದೇ ಕ್ಷಣದಲ್ಲಿ ಗುಡ್ಡದ ಒಂದು ಭಾಗದಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ರಾತ್ರಿ ವೇಳೆ ವಿಪರೀತ ಮಂಜು ಆವರಿಸುವುದರಿಂದ ಅಪಾಯ ಹೆಚ್ಚು. ಹೀಗಾಗಿ, ತಾತ್ಕಾಲಿಕವಾಗಿ ಒಂದು ರಾತ್ರಿ ಮಾತ್ರ ಸಂಚಾರ ನಿಷೇಧಿಸಲಾಗಿದೆ. ಬುಧವಾರ ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು.