<p>ಮಡಿಕೇರಿ: ಇಲ್ಲಿನ ಐತಿಹಾಸಿಕ ಮುತ್ತಪ್ಪ ದೇಗುಲದಲ್ಲಿ ಏ. 1ರಿಂದ 4ರವರೆಗೆ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ.</p>.<p>‘ಕ್ಷೇತ್ರದ ತಂತ್ರಿ ಕೇರಳದ ಪಯ್ಯನ್ಯೂರಿನ ಕುನ್ನತ್ತಿಲ್ಲತ್ ಮುರಳಿ ಕೃಷ್ಣ ನಂಬೂದರಿ ಹಾಗೂ ಪರಿಶಿನಿಕಡವು ಮುತ್ತಪ್ಪ ಕ್ಷೇತ್ರದ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನೇತೃತ್ವದಲ್ಲಿ ಈ ಮಹೋತ್ಸವ ನಡೆಯಲಿದೆ‘ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಏಪ್ರಿಲ್ 1ರಂದು ಸಂಜೆ 6.30ರಿಂದ ಆರಂಭವಾಗಲಿದೆ. 2ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, 9ಕ್ಕೆ ಸುಬ್ರಹ್ಮಣ್ಯಸ್ವಾಮಿಗೆ ಅಷ್ಟಾಭಿಷೇಕ, 10ಕ್ಕೆ ಅಯ್ಯಪ್ಪಸ್ವಾಮಿಗೆ ತುಪ್ಪಾಭಿಷೇಕ, 11ಕ್ಕೆ ನಾಗದೇವರಿಗೆ ತಂಬೀಲ ಸಮರ್ಪಣೆ, 11.30ಕ್ಕೆ ಕಲಶಾಭಿಷೇಷಕ, ಮಧ್ಯಾಹ್ಮ 12ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.</p>.<p>ಉತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ’ಏಪ್ರಿಲ್ 2ರಂದು ಸಂಜೆ 4 ಗಂಟೆಗೆ ಧ್ವಜಾರೋಹಣ ಮಾಡುವುದರ ಮೂಲಕ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ ಆರಂಭವಾಗಲಿದೆ. 4.30ಕ್ಕೆ ಮುತ್ತಪ್ಪ ದೇವರ ಮಲೆ ಇಳಿಸುವುದು, 5.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ (ತೆರೆ) ನಡೆಯಲಿದೆ. 6.30ಕ್ಕೆ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ ನಡೆಯಲಿದೆ. ನಂತರ 7 ಕ್ಕೆ ಹರಕೆ ಕೋಲಗಳು ನಡೆಯಲಿವೆ. ಏಪ್ರಿಲ್ 3ರಂದು ಸಂಜೆ 5.30ಕ್ಕೆ ಮುತ್ತಪ್ಪ ದೇವರ ಕಲಶ ಮೆರವಣಿಗೆಯು ಗಾಂಧಿ ಮೈದಾನದಿಂದ ಹೊರಡಲಿದೆ. ನಗರದ ನಾಲ್ಕೂ ದಿಕ್ಕಿನಿಂದ ಹೊರಡುವ ಈ ಮೆರವಣಿಗೆಯಲ್ಲಿ ಕಲಾತಂಡಗಳು, ಚಂಡೆ ವಾದ್ಯಗಳ ಸಹಿತ ಆಕರ್ಷಕ ವಿದ್ಯುತ್ ಅಲಂಕೃತ ಮಂಟಪಗಳು ಇರಲಿವೆ ಎಂದು ಹೇಳಿದರು.</p>.<p>ಬಳಿಕ ಸಂಜೆ 4ಕ್ಕೆ ಮುತ್ತಪ್ಪ ದೇವರ ಮಲೆ ಇಳಿಸುವುದು, 4.30ಕ್ಕೆ ಶಾಸ್ತಪ್ಪ ದೇವರ ವೆಳ್ಳಾಟಂ, 5.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ, 7 ಗಂಟೆಗೆ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ 8.40ರಿಂದ 10.30ರವರೆಗೆ ಅನ್ನಸಂತರ್ಪಣೆ ಇರಲಿದೆ ಎಂದರು.</p>.<p>ರಾತ್ರಿ 9.30ಕ್ಕೆ ಪೊವದಿ ವೆಳ್ಳಾಟಂ, 10.30ಕ್ಕೆ ವಿಷ್ಣುಮೂರ್ತಿ ವೆಳ್ಳಾಟಂ, ರಾತ್ರಿ 12ಕ್ಕೆ ಶಿವಭೂತ ತೆರೆ, 1 ಗಂಟೆಗೆ ಗುಳಿಗ ದೇವರ ತೆರೆ, 2 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ, 2.30ಕ್ಕೆ ಕುಟ್ಟಿಚಾತನ್ ದೇವರ ತೆರೆ ನಡೆಯಲಿದೆ ಎಂದು ತಿಳಿಸಿದರು.</p>.<p>ಮರುದಿನ ಏಪ್ರಿಲ್ 4ರಂದು ಬೆಳಿಗ್ಗೆ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, 5ಕ್ಕೆ ವಿಷ್ಣುಮೂರ್ತಿ ದೇವರ ಮೇಲೇರಿ, 8 ಗಂಟೆಗೆ ಪೋದಿ ತೆರೆ, 9.30ಕ್ಕೆ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ಯ 11.30 ಕ್ಕೆ ಧ್ವಜ ಅವರೋಹಣ ನಡೆಯಲಿದೆ ಎಂದು ಹೇಳಿದರು.</p>.<p>ದೇಗುಲದ ಪ್ರಮುಖರಾದ ಕೆ.ಎಸ್.ರಮೇಶ್, ಕಾಳಚಂಡ ರಾಣಿ ಗಣಪತಿ, ಉನ್ನಿಕೃಷ್ಣ, ವಾಸುದೇವ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1210804998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಇಲ್ಲಿನ ಐತಿಹಾಸಿಕ ಮುತ್ತಪ್ಪ ದೇಗುಲದಲ್ಲಿ ಏ. 1ರಿಂದ 4ರವರೆಗೆ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ.</p>.<p>‘ಕ್ಷೇತ್ರದ ತಂತ್ರಿ ಕೇರಳದ ಪಯ್ಯನ್ಯೂರಿನ ಕುನ್ನತ್ತಿಲ್ಲತ್ ಮುರಳಿ ಕೃಷ್ಣ ನಂಬೂದರಿ ಹಾಗೂ ಪರಿಶಿನಿಕಡವು ಮುತ್ತಪ್ಪ ಕ್ಷೇತ್ರದ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನೇತೃತ್ವದಲ್ಲಿ ಈ ಮಹೋತ್ಸವ ನಡೆಯಲಿದೆ‘ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಏಪ್ರಿಲ್ 1ರಂದು ಸಂಜೆ 6.30ರಿಂದ ಆರಂಭವಾಗಲಿದೆ. 2ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, 9ಕ್ಕೆ ಸುಬ್ರಹ್ಮಣ್ಯಸ್ವಾಮಿಗೆ ಅಷ್ಟಾಭಿಷೇಕ, 10ಕ್ಕೆ ಅಯ್ಯಪ್ಪಸ್ವಾಮಿಗೆ ತುಪ್ಪಾಭಿಷೇಕ, 11ಕ್ಕೆ ನಾಗದೇವರಿಗೆ ತಂಬೀಲ ಸಮರ್ಪಣೆ, 11.30ಕ್ಕೆ ಕಲಶಾಭಿಷೇಷಕ, ಮಧ್ಯಾಹ್ಮ 12ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.</p>.<p>ಉತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ’ಏಪ್ರಿಲ್ 2ರಂದು ಸಂಜೆ 4 ಗಂಟೆಗೆ ಧ್ವಜಾರೋಹಣ ಮಾಡುವುದರ ಮೂಲಕ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ ಆರಂಭವಾಗಲಿದೆ. 4.30ಕ್ಕೆ ಮುತ್ತಪ್ಪ ದೇವರ ಮಲೆ ಇಳಿಸುವುದು, 5.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ (ತೆರೆ) ನಡೆಯಲಿದೆ. 6.30ಕ್ಕೆ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ ನಡೆಯಲಿದೆ. ನಂತರ 7 ಕ್ಕೆ ಹರಕೆ ಕೋಲಗಳು ನಡೆಯಲಿವೆ. ಏಪ್ರಿಲ್ 3ರಂದು ಸಂಜೆ 5.30ಕ್ಕೆ ಮುತ್ತಪ್ಪ ದೇವರ ಕಲಶ ಮೆರವಣಿಗೆಯು ಗಾಂಧಿ ಮೈದಾನದಿಂದ ಹೊರಡಲಿದೆ. ನಗರದ ನಾಲ್ಕೂ ದಿಕ್ಕಿನಿಂದ ಹೊರಡುವ ಈ ಮೆರವಣಿಗೆಯಲ್ಲಿ ಕಲಾತಂಡಗಳು, ಚಂಡೆ ವಾದ್ಯಗಳ ಸಹಿತ ಆಕರ್ಷಕ ವಿದ್ಯುತ್ ಅಲಂಕೃತ ಮಂಟಪಗಳು ಇರಲಿವೆ ಎಂದು ಹೇಳಿದರು.</p>.<p>ಬಳಿಕ ಸಂಜೆ 4ಕ್ಕೆ ಮುತ್ತಪ್ಪ ದೇವರ ಮಲೆ ಇಳಿಸುವುದು, 4.30ಕ್ಕೆ ಶಾಸ್ತಪ್ಪ ದೇವರ ವೆಳ್ಳಾಟಂ, 5.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ, 7 ಗಂಟೆಗೆ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ 8.40ರಿಂದ 10.30ರವರೆಗೆ ಅನ್ನಸಂತರ್ಪಣೆ ಇರಲಿದೆ ಎಂದರು.</p>.<p>ರಾತ್ರಿ 9.30ಕ್ಕೆ ಪೊವದಿ ವೆಳ್ಳಾಟಂ, 10.30ಕ್ಕೆ ವಿಷ್ಣುಮೂರ್ತಿ ವೆಳ್ಳಾಟಂ, ರಾತ್ರಿ 12ಕ್ಕೆ ಶಿವಭೂತ ತೆರೆ, 1 ಗಂಟೆಗೆ ಗುಳಿಗ ದೇವರ ತೆರೆ, 2 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ, 2.30ಕ್ಕೆ ಕುಟ್ಟಿಚಾತನ್ ದೇವರ ತೆರೆ ನಡೆಯಲಿದೆ ಎಂದು ತಿಳಿಸಿದರು.</p>.<p>ಮರುದಿನ ಏಪ್ರಿಲ್ 4ರಂದು ಬೆಳಿಗ್ಗೆ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, 5ಕ್ಕೆ ವಿಷ್ಣುಮೂರ್ತಿ ದೇವರ ಮೇಲೇರಿ, 8 ಗಂಟೆಗೆ ಪೋದಿ ತೆರೆ, 9.30ಕ್ಕೆ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ಯ 11.30 ಕ್ಕೆ ಧ್ವಜ ಅವರೋಹಣ ನಡೆಯಲಿದೆ ಎಂದು ಹೇಳಿದರು.</p>.<p>ದೇಗುಲದ ಪ್ರಮುಖರಾದ ಕೆ.ಎಸ್.ರಮೇಶ್, ಕಾಳಚಂಡ ರಾಣಿ ಗಣಪತಿ, ಉನ್ನಿಕೃಷ್ಣ, ವಾಸುದೇವ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1210804998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>