ಮಡಿಕೇರಿ: ನಗರದ ಮಹದೇವಪೇಟೆ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಬೀಗಮುದ್ರೆ ಹಾಕಿದೆ.
ಬುಧವಾರ ತಡರಾತ್ರಿ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಹಾಗೂ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಚೇರಿಯ ಮೇಲೆ ದಾಳಿ ನಡೆಸಲಾಯಿತು. ಬೀಗವನ್ನು ಒಡೆದು ಪ್ರವೇಶಿಸಿದ ಅಧಿಕಾರಿಗಳು ಕಚೇರಿಯನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಬೀಗಮುದ್ರೆ ಹಾಕಿದರು.