<p>ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಧಾರಾಕಾರ ಮಳೆ ಹಾಗೂ ಗಾಳಿ ಮುಂದುವರೆದಿದ್ದು, ಹಾರಂಗಿ ಜಲಾಶಯದ ಒಳ ಹರಿವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ 8,702 ಕ್ಯುಸೆಕ್ಗೆ ಏರಿಕೆಯಾಗಿದೆ. </p><p>2,859 ಗರಿಷ್ಠ ಅಡಿಯ ಜಲಾಶಯದಲ್ಲಿ ಈಗ 2,853.63 ಅಡಿಗಳಷ್ಟು ನೀರಿದೆ. ಜಲಾಶಯ ಗರಿಷ್ಟ ಮಟ್ಟ ತುಂಬಲು ಇನ್ನು ಕೇವಲ 6.5 ಅಡಿಗಳಷ್ಟೇ ಬಾಕಿ ಇದೆ. </p><p>ಹವಾಮಾನ ಇಲಾಖೆಯು ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಮುನ್ನಚ್ಚರಿಕೆ ನೀಡಿರುವುದರಿಂದ ಜಲಾಶಯದ ಅಧಿಕಾರಿಗಳು ಒಳ ಹರಿವಿನ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.</p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ‘ಜಲಾಶಯದ ಒಳ ಹರಿವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಇದೇ ಪ್ರಮಾಣದಲ್ಲಿ ಒಳ ಹರಿವು ಇದ್ದರೆ ನಾಳೆ ಮಧ್ಯಾಹ್ನ ಇಲ್ಲವೇ ಸಂಜೆಯ ಒಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. </p><p>ಹವಾಮಾನ ಇಲಾಖೆ ಭಾರಿಯಿಂದ ಅತಿ ಭಾರಿ ಮಳೆಯ ಮುನ್ನಚ್ಚರಿಕೆ ನೀಡಿರುವುದರಿಂದ ಈಗಾಗಲೇ ನದಿ ತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಧಾರಾಕಾರ ಮಳೆ ಹಾಗೂ ಗಾಳಿ ಮುಂದುವರೆದಿದ್ದು, ಹಾರಂಗಿ ಜಲಾಶಯದ ಒಳ ಹರಿವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ 8,702 ಕ್ಯುಸೆಕ್ಗೆ ಏರಿಕೆಯಾಗಿದೆ. </p><p>2,859 ಗರಿಷ್ಠ ಅಡಿಯ ಜಲಾಶಯದಲ್ಲಿ ಈಗ 2,853.63 ಅಡಿಗಳಷ್ಟು ನೀರಿದೆ. ಜಲಾಶಯ ಗರಿಷ್ಟ ಮಟ್ಟ ತುಂಬಲು ಇನ್ನು ಕೇವಲ 6.5 ಅಡಿಗಳಷ್ಟೇ ಬಾಕಿ ಇದೆ. </p><p>ಹವಾಮಾನ ಇಲಾಖೆಯು ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಮುನ್ನಚ್ಚರಿಕೆ ನೀಡಿರುವುದರಿಂದ ಜಲಾಶಯದ ಅಧಿಕಾರಿಗಳು ಒಳ ಹರಿವಿನ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.</p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ‘ಜಲಾಶಯದ ಒಳ ಹರಿವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಇದೇ ಪ್ರಮಾಣದಲ್ಲಿ ಒಳ ಹರಿವು ಇದ್ದರೆ ನಾಳೆ ಮಧ್ಯಾಹ್ನ ಇಲ್ಲವೇ ಸಂಜೆಯ ಒಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. </p><p>ಹವಾಮಾನ ಇಲಾಖೆ ಭಾರಿಯಿಂದ ಅತಿ ಭಾರಿ ಮಳೆಯ ಮುನ್ನಚ್ಚರಿಕೆ ನೀಡಿರುವುದರಿಂದ ಈಗಾಗಲೇ ನದಿ ತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>