<p>ಮಡಿಕೇರಿ: ಇಲ್ಲಿನ ಹೊರವಲಯದ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದಲ್ಲಿ ಮಂಗಳವಾರ ದೇವಿಯ ರಥವನ್ನು ಕಟ್ಟುನಿಟ್ಟಿನಿಂದ ವ್ರತಾಚಾರಣೆ ಮಾಡಿದ್ದ ಭಕ್ತರು ಎಳೆಯುತ್ತಿದ್ದಂತೆ ಅಸಂಖ್ಯಾತ ಭಕ್ತ ಜನರು ಕೈಮುಗಿದರು. ರಥೋತ್ಸವ ದೇವಸ್ಥಾನದ ಆವರಣದ ಸುತ್ತಲೂ ಸಾಗಿ ಬರುತ್ತಿದ್ದಂತೆ, ಭಕ್ತರು ಕೈಮುಗಿದು ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.</p>.<p>ದೇಗುಲದ ವಾರ್ಷಿಕೋತ್ಸವ ಹಾಗೂ ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥಸ್ನಾನ, ಕಳಸ ಪೂಜೆಗಳು ನಡೆದವು.</p>.<p>ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.</p>.<p>ಸಂಜೆ ದೇವಸ್ಥಾನದ ಆವರಣದಲ್ಲಿ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರ ನಡೆಯಿತು.</p>.<p>ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.</p>.<p>ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ |ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ನಡೆಯುವುದರೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-50098862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಇಲ್ಲಿನ ಹೊರವಲಯದ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದಲ್ಲಿ ಮಂಗಳವಾರ ದೇವಿಯ ರಥವನ್ನು ಕಟ್ಟುನಿಟ್ಟಿನಿಂದ ವ್ರತಾಚಾರಣೆ ಮಾಡಿದ್ದ ಭಕ್ತರು ಎಳೆಯುತ್ತಿದ್ದಂತೆ ಅಸಂಖ್ಯಾತ ಭಕ್ತ ಜನರು ಕೈಮುಗಿದರು. ರಥೋತ್ಸವ ದೇವಸ್ಥಾನದ ಆವರಣದ ಸುತ್ತಲೂ ಸಾಗಿ ಬರುತ್ತಿದ್ದಂತೆ, ಭಕ್ತರು ಕೈಮುಗಿದು ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.</p>.<p>ದೇಗುಲದ ವಾರ್ಷಿಕೋತ್ಸವ ಹಾಗೂ ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥಸ್ನಾನ, ಕಳಸ ಪೂಜೆಗಳು ನಡೆದವು.</p>.<p>ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.</p>.<p>ಸಂಜೆ ದೇವಸ್ಥಾನದ ಆವರಣದಲ್ಲಿ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರ ನಡೆಯಿತು.</p>.<p>ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.</p>.<p>ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ |ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ನಡೆಯುವುದರೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-50098862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>