<p><strong>ಮಡಿಕೇರಿ:</strong> ಅಂತರರಾಷ್ಟ್ರೀಯ ಹೋಟೆಲ್ ನಿರ್ವಹಣಾ ಸಂಸ್ಥೆ (ಐಐಎಚ್ಎಂ) ವತಿಯಿಂದ ಇಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಈಚೆಗೆ 50 ಮಂದಿ ಶಿಕ್ಷಕರನ್ನು ಗೌರವಿಸಲಾಯಿತು.</p> <p>ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಮಾತನಾಡಿ, ‘ಶಿಕ್ಷಕರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು. ಜೊತೆಗೆ, ಸಂಸ್ಥೆಯು ಕೊಡಗಿನಲ್ಲಿ ತಮ್ಮ ಶಾಖೆಗಳನ್ನು ತೆರೆಯಬೇಕು’ ಎಂದು ಅಭಿಪ್ರಾಯಪಟ್ಟರು.</p><p>ಸಂಸ್ಥೆಯ ದಕ್ಷಿಣ ಭಾರತದ ನಿರ್ದೇಶಕ ಸಂಚಾರಿ ಚೌಧರಿ ಮಾತನಾಡಿ, ‘ನಮ್ಮ ಸಂಸ್ಥೆ ವತಿಯಿಂದ ಈ ಬಾರಿ ಕೊಡಗಿನಲ್ಲಿ ಸಾಧನೆಗೈದ 50 ಮಂದಿ ಶಿಕ್ಷಕರನ್ನು ಗೌರವಿಸುತ್ತಿರುವುದು ಅತ್ಯಂತ ಸಂತಸ ತಂದಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಕೊಡಗಿನಲ್ಲಿ ನಮ್ಮ ಸಂಸ್ಥೆಯು ಶಾಖೆಯನ್ನು ಆರಂಭಿಸಿ ಕೊಡಗಿನ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಶಿಕ್ಷಣ ನೀಡುವ ಅಭಿಲಾಷೆ ಇದೆ’ ಎಂದು ತಿಳಿಸಿದರು.</p><p>ಸಂಸ್ಥೆಯ ಸ್ಥಾಪಕ ಡಾ ಸುವರ್ನೋ ಬೋಸ್ ಅವರು ವಿಡಿಯೊ ಮೂಲಕ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.</p><p>ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಮಾತನಾಡಿ, ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.</p><p>ಯುಡಬ್ಲ್ಯೂಎಲ್ ಸಂಸ್ಥೆಯ ಕಾರ್ಯಕ್ರಮ ಪ್ರಮುಖರಾದ ಪಾರ್ವತಿ ಸುಬ್ಬಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಅಂತರರಾಷ್ಟ್ರೀಯ ಹೋಟೆಲ್ ನಿರ್ವಹಣಾ ಸಂಸ್ಥೆ (ಐಐಎಚ್ಎಂ) ವತಿಯಿಂದ ಇಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಈಚೆಗೆ 50 ಮಂದಿ ಶಿಕ್ಷಕರನ್ನು ಗೌರವಿಸಲಾಯಿತು.</p> <p>ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಮಾತನಾಡಿ, ‘ಶಿಕ್ಷಕರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು. ಜೊತೆಗೆ, ಸಂಸ್ಥೆಯು ಕೊಡಗಿನಲ್ಲಿ ತಮ್ಮ ಶಾಖೆಗಳನ್ನು ತೆರೆಯಬೇಕು’ ಎಂದು ಅಭಿಪ್ರಾಯಪಟ್ಟರು.</p><p>ಸಂಸ್ಥೆಯ ದಕ್ಷಿಣ ಭಾರತದ ನಿರ್ದೇಶಕ ಸಂಚಾರಿ ಚೌಧರಿ ಮಾತನಾಡಿ, ‘ನಮ್ಮ ಸಂಸ್ಥೆ ವತಿಯಿಂದ ಈ ಬಾರಿ ಕೊಡಗಿನಲ್ಲಿ ಸಾಧನೆಗೈದ 50 ಮಂದಿ ಶಿಕ್ಷಕರನ್ನು ಗೌರವಿಸುತ್ತಿರುವುದು ಅತ್ಯಂತ ಸಂತಸ ತಂದಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಕೊಡಗಿನಲ್ಲಿ ನಮ್ಮ ಸಂಸ್ಥೆಯು ಶಾಖೆಯನ್ನು ಆರಂಭಿಸಿ ಕೊಡಗಿನ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಶಿಕ್ಷಣ ನೀಡುವ ಅಭಿಲಾಷೆ ಇದೆ’ ಎಂದು ತಿಳಿಸಿದರು.</p><p>ಸಂಸ್ಥೆಯ ಸ್ಥಾಪಕ ಡಾ ಸುವರ್ನೋ ಬೋಸ್ ಅವರು ವಿಡಿಯೊ ಮೂಲಕ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.</p><p>ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಮಾತನಾಡಿ, ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.</p><p>ಯುಡಬ್ಲ್ಯೂಎಲ್ ಸಂಸ್ಥೆಯ ಕಾರ್ಯಕ್ರಮ ಪ್ರಮುಖರಾದ ಪಾರ್ವತಿ ಸುಬ್ಬಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>