<p><strong>ಮಡಿಕೇರಿ:</strong> ಜುಲೈ 15 ರ ಬಳಿಕ ಕೊಡಗು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.</p><p>ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ವತಿಯಿಂದ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.</p><p> ರಾಜ್ಯದಲ್ಲಿ ಬದಲಾವಣೆ ಆಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸದ್ಯದಲ್ಲೇ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು ಬಳಿಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಾಗುವುದು ಎಂದರು.</p><p>ಮರ, ಗಿಡಗಳನ್ನು ನೆಟ್ಟು ಕೆರೆಗಳನ್ನು ನಿರ್ಮಿಸಿ ಪರಿಸರ ಕಾಪಾಡಿದವರು ಕೆಂಪೇಗೌಡ ಎಂದು ಹೇಳಿದರು.</p><p>ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ, ಬೆಂಗಳೂರಿನಲ್ಲಿನ ಕೆರೆಗಳು ಹಾಗೂ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.</p><p>ಶಾಸಕ ಡಾ.ಮಂತರ್ ಗೌಡ ಮಾತನಾಡಿ, 'ಸಣ್ಣ ನೀರಾವರಿ ಸಚಿವರೂ ಆಗಿರುವ ಭೋಸರಾಜು ಅವರು ಕೊಡಗು ಜಿಲ್ಲೆಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು. </p><p>ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜುಲೈ 15 ರ ಬಳಿಕ ಕೊಡಗು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.</p><p>ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ವತಿಯಿಂದ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.</p><p> ರಾಜ್ಯದಲ್ಲಿ ಬದಲಾವಣೆ ಆಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸದ್ಯದಲ್ಲೇ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು ಬಳಿಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಾಗುವುದು ಎಂದರು.</p><p>ಮರ, ಗಿಡಗಳನ್ನು ನೆಟ್ಟು ಕೆರೆಗಳನ್ನು ನಿರ್ಮಿಸಿ ಪರಿಸರ ಕಾಪಾಡಿದವರು ಕೆಂಪೇಗೌಡ ಎಂದು ಹೇಳಿದರು.</p><p>ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ, ಬೆಂಗಳೂರಿನಲ್ಲಿನ ಕೆರೆಗಳು ಹಾಗೂ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.</p><p>ಶಾಸಕ ಡಾ.ಮಂತರ್ ಗೌಡ ಮಾತನಾಡಿ, 'ಸಣ್ಣ ನೀರಾವರಿ ಸಚಿವರೂ ಆಗಿರುವ ಭೋಸರಾಜು ಅವರು ಕೊಡಗು ಜಿಲ್ಲೆಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು. </p><p>ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>