ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಕಿವಿ ಮೂಗು ಮತ್ತು ಗಂಟಲು ವಿಭಾಗ ವತಿಯಿಂದ ‘ವಿಶ್ವ ಶ್ರವಣ ದಿನ’ ಪ್ರಯುಕ್ತ ಮಡಿಕೇರಿಯ ರಾಜಾಸೀಟು ಉದ್ಯಾನ ಆವರಣದಲ್ಲಿ ಶ್ರವಣದ ಮಹತ್ವ ಕುರಿತ ಜಾಗೃತಿ ಜಾಥಾಕ್ಕೆ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಮಂಗಳವಾರ ಚಾಲನೆ ನೀಡಿದರು
ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು

ಪ್ರತಿಯೊಬ್ಬರ ಸಮೂಹ ಸಂವಹನಕ್ಕೆ ಶ್ರವಣ ಅತೀ ಮುಖ್ಯ ಅಂಗವಾಗಿದೆ. ಆದ್ದರಿಂದ ಈ ಬಗ್ಗೆ ಉದಾಸೀನ ಮಾಡದೆ ತಜ್ಞ ವೈದ್ಯರಿಂದ ಪರೀಕ್ಷಿಸಿ ಕೊಳ್ಳಬೇಕು
ಡಾ.ಅಭಿನಂದನ್ ಸ್ಥಾನಿಕ ವೈದ್ಯಾಧಿಕಾರಿ.
ಶ್ರವಣ ಆರೋಗ್ಯವು ಸಮಗ್ರ ಆರೋಗ್ಯದ ಅವಿಭಾಜ್ಯ ಅಂಗವಾಗಿದ್ದು ಶ್ರವಣ ದೋಷ ಉಂಟಾದ ಕೂಡಲೇ ಶೀಘ್ರ ತಪಾಸಣೆಗೆ ಒಳಗಾಗಬೇಕು
ಡಾ.ಶ್ವೇತಾ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ ಮೂಗು ಮತ್ತು ಗಂಟಲು ವಿಭಾಗದ ಮುಖ್ಯಸ್ಥೆ.