ಇಲ್ಲಿನ ದಾಸವಾಳ ಬಡಾವಣೆಯಲ್ಲಿರುವ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವ ನಡೆಯಿತು. ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ನಂತರ ಗಣಪತಿ ಹೋಮ, ಮಹಾಪೂಜೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.