<p><strong>ಮಡಿಕೇರಿ</strong>: ವಕೀಲ ವೃತ್ತಿಯ ಘನತೆಯನ್ನು ಸದಾ ಎತ್ತರದಲ್ಲಿರುವಂತೆ ಪ್ರತಿಯೊಬ್ಬ ವಕೀಲರೂ ಗಮನಹರಿಸಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಮಂಗಳವಾರ ನಡೆದ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾರ್ಗದರ್ಶಿಗಳಾಗಬೇಕು ಎಂದರು.</p>.<p>ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್.ದೇವದಾಸ್ ಮಾತನಾಡಿ, ‘75 ವರ್ಷಗಳನ್ನು ಪೂರೈಸಿರುವ ದೇಶದ ಸಂವಿಧಾನ ಅಪಾಯದಲ್ಲಿದೆ ಎಂಬ ಕೂಗು ಕೇಳಿಬಂದಿರುವ ಈ ಕಾಲಘಟ್ಟದಲ್ಲಿ, ವಕೀಲರು ಸಂವಿಧಾನದ ಸಂರಕ್ಷರಾಗುವತ್ತ ಮುಂದಡಿ ಇರಿಸಬೇಕು’ ಎಂದು ತಿಳಿಸಿದರು.</p>.<p>ಮಡಿಕೇರಿ ನ್ಯಾಯಾಲಯಕ್ಕೆ ₹ 1,30 ಕೋಟಿ ಮೊತ್ತದ ತಡೆಗೋಡೆ ಕಾಮಗಾರಿಗೆ ಸರ್ಕಾರದಿಂದ ಮಂಜುರಾತಿ ಕೊಡಿಸುವಂತೆ ವಕೀಲರ ಸಂಘದ ವತಿಯಿಂದ ಅಧ್ಯಕ್ಷ ನಿರಂಜನ್ ಅವರು ಪೊನ್ನಣ್ಣ ಅವರಿಗೆ ಮನವಿ ಪತ್ರ ನೀಡಿದರು.</p>.<p>ಮಡಿಕೇರಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಖಜಾಂಜಿ ಜಿ.ಆರ್.ರವಿಶಂಕರ್, ಉಪಾಧ್ಯಕ್ಷ ಪವನ್ ಪೆಮ್ಮಯ್ಯ, ಎಂ.ಆರ್ ಜಿತೇಂದ್ರ, ಕಪಿಲ್ ಕುಮಾರ್ ಭಾಗವಹಿಸಿದ್ದರು. ವಕೀಲರ ಸಾಧಕ ಮಕ್ಕಳಿಗೆ ಬಹುಮಾನ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ವಕೀಲರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ವಕೀಲ ವೃತ್ತಿಯ ಘನತೆಯನ್ನು ಸದಾ ಎತ್ತರದಲ್ಲಿರುವಂತೆ ಪ್ರತಿಯೊಬ್ಬ ವಕೀಲರೂ ಗಮನಹರಿಸಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಮಂಗಳವಾರ ನಡೆದ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾರ್ಗದರ್ಶಿಗಳಾಗಬೇಕು ಎಂದರು.</p>.<p>ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್.ದೇವದಾಸ್ ಮಾತನಾಡಿ, ‘75 ವರ್ಷಗಳನ್ನು ಪೂರೈಸಿರುವ ದೇಶದ ಸಂವಿಧಾನ ಅಪಾಯದಲ್ಲಿದೆ ಎಂಬ ಕೂಗು ಕೇಳಿಬಂದಿರುವ ಈ ಕಾಲಘಟ್ಟದಲ್ಲಿ, ವಕೀಲರು ಸಂವಿಧಾನದ ಸಂರಕ್ಷರಾಗುವತ್ತ ಮುಂದಡಿ ಇರಿಸಬೇಕು’ ಎಂದು ತಿಳಿಸಿದರು.</p>.<p>ಮಡಿಕೇರಿ ನ್ಯಾಯಾಲಯಕ್ಕೆ ₹ 1,30 ಕೋಟಿ ಮೊತ್ತದ ತಡೆಗೋಡೆ ಕಾಮಗಾರಿಗೆ ಸರ್ಕಾರದಿಂದ ಮಂಜುರಾತಿ ಕೊಡಿಸುವಂತೆ ವಕೀಲರ ಸಂಘದ ವತಿಯಿಂದ ಅಧ್ಯಕ್ಷ ನಿರಂಜನ್ ಅವರು ಪೊನ್ನಣ್ಣ ಅವರಿಗೆ ಮನವಿ ಪತ್ರ ನೀಡಿದರು.</p>.<p>ಮಡಿಕೇರಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಖಜಾಂಜಿ ಜಿ.ಆರ್.ರವಿಶಂಕರ್, ಉಪಾಧ್ಯಕ್ಷ ಪವನ್ ಪೆಮ್ಮಯ್ಯ, ಎಂ.ಆರ್ ಜಿತೇಂದ್ರ, ಕಪಿಲ್ ಕುಮಾರ್ ಭಾಗವಹಿಸಿದ್ದರು. ವಕೀಲರ ಸಾಧಕ ಮಕ್ಕಳಿಗೆ ಬಹುಮಾನ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ವಕೀಲರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>