ಕೇಂದ್ರ ಸರ್ಕಾರ ದೇಶವನ್ನು ಡಿಜಿಟಲ್ ಇಂಡಿಯಾ ಮಾಡುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕದ ಮೂಲಕ ಪ್ರಗತಿ ಸಾಧಿಸಲು ಯೋಜನೆಯನ್ನು ರೂಪಿಸಿ, ಅನುಮತಿ ಕೋರಿದರೆ ಸ್ವತಃ ಬಿಜೆಪಿ ಕಾರ್ಯಕರ್ತರೇ ತಡೆ ಮಾಡುತ್ತಿದ್ದಾರೆ. ಬೆರಳೆಣಿಕೆಯಷ್ಟು ಮಂದಿ ಸ್ವಾರ್ಥಕ್ಕಾಗಿ ಟವರ್ ನಿರ್ಮಾಣಕ್ಕೆ ತಡೆಯೊಡ್ಡುವ ಮೂಲಕ ಗ್ರಾಮಸ್ಥರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.