ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21 ಕೆ.ಜಿ ಶ್ರೀಗಂಧ ಅಕ್ರಮ ಸಂಗ್ರಹ

ತೊರೆನೂರು ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆಯ ಆರೋಪಿ ಬಂಧನ
Last Updated 25 ಜೂನ್ 2021, 2:57 IST
ಅಕ್ಷರ ಗಾತ್ರ

ಕುಶಾಲನಗರ/ ಸೋಮವಾರಪೇಟೆ: ಸಮೀಪದ ತೊರೆನೂರು ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹83 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಸೋಮವಾರಪೇಟೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮದ ಎ.ಕೆ.ಪ್ರಸನ್ನ ಬಂಧಿತ ವ್ಯಕ್ತಿ.

ಸಿಐಡಿ ಅರಣ್ಯ ಘಟಕದ ಮಡಿಕೇರಿ ಎಸ್‌ಪಿ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ಅರಣ್ಯ ಸಂಚಾರಿ ದಳದ ಪಿಎಸ್ಐ ಎಂ.ಡಿ.ಅಪ್ಪಾಜಿ ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಆಧರಿಸಿ ಅಳಿಲುಗುಪ್ಪೆ ಪ್ರಸನ್ನ ಅವರ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ಸಂಗ್ರಹಿಸಿದ್ದ 21 ಕೆ.ಜಿ ಶ್ರೀಗಂಧದ ತುಂಡುಗಳು ಸಿಕ್ಕಿವೆ.

ಆರೋಪಿ ಬಂಧಿಸಿ, ಮುಂದಿನ ತನಿಖೆಗಾಗಿ ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆದೊಯ್ಯಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಗಳಾದ ಕೆ.ಎಸ್.ಚಂಗಪ್ಪ, ಎಸ್.ಆರ್.ರಮೇಶ್, ರಾಘವೇಂದ್ರ, ಚಾಲಕ ಎಸ್.ಎಂ.ಗಣೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT