<p><strong>ಮಡಿಕೇರಿ</strong>: ಇಲ್ಲಿನ ಕೋಟೆ ಸಮೀಪದ ಗೋಡೌನ್ವೊಂದರಲ್ಲಿ ದೇವಜನ ಜಗದೀಶ್ (56) ಎಂಬುವವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಇವರು ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿ ವಾಹನಗಳ ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿದ್ದರು. ವ್ಯಾಪಾರದಲ್ಲಿ ಕುಸಿತ ಉಂಟಾಗಿ ಸಾಲ ಹೆಚ್ಚಾಗಿದ್ದರಿಂದ ಅವರು ಬೇಸರಗೊಂಡಿದ್ದರು. ಶುಕ್ರವಾರ ಸಂಜೆ ಅವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇವರ ಆತ್ಮಹತ್ಯೆಗೆ ಮೈಕ್ರೊ ಫೈನಾನ್ಸ್ ಕಿರುಕುಳ ಕಾರಣ ಎಂಬ ಸುದ್ದಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಕುರಿತು ‘ಪ್ರಜಾವಾಣಿ’ಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಸಂಪರ್ಕಿಸಿದಾಗ ಅವರು, ‘ಮೈಕ್ರೋ ಫೈನಾನ್ಸ್ ಕಿರುಕುಳ ಇತ್ತು ಎಂದು ಮೃತರ ಸಂಬಂಧಿಕರು ದೂರು ನೀಡಿಲ್ಲ. ಅನಾರೋಗ್ಯ, ಆರ್ಥಿಕ ತೊಂದರೆ, ವ್ಯಾಪಾರ ನಷ್ಟದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಕೋಟೆ ಸಮೀಪದ ಗೋಡೌನ್ವೊಂದರಲ್ಲಿ ದೇವಜನ ಜಗದೀಶ್ (56) ಎಂಬುವವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಇವರು ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿ ವಾಹನಗಳ ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿದ್ದರು. ವ್ಯಾಪಾರದಲ್ಲಿ ಕುಸಿತ ಉಂಟಾಗಿ ಸಾಲ ಹೆಚ್ಚಾಗಿದ್ದರಿಂದ ಅವರು ಬೇಸರಗೊಂಡಿದ್ದರು. ಶುಕ್ರವಾರ ಸಂಜೆ ಅವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇವರ ಆತ್ಮಹತ್ಯೆಗೆ ಮೈಕ್ರೊ ಫೈನಾನ್ಸ್ ಕಿರುಕುಳ ಕಾರಣ ಎಂಬ ಸುದ್ದಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಕುರಿತು ‘ಪ್ರಜಾವಾಣಿ’ಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಸಂಪರ್ಕಿಸಿದಾಗ ಅವರು, ‘ಮೈಕ್ರೋ ಫೈನಾನ್ಸ್ ಕಿರುಕುಳ ಇತ್ತು ಎಂದು ಮೃತರ ಸಂಬಂಧಿಕರು ದೂರು ನೀಡಿಲ್ಲ. ಅನಾರೋಗ್ಯ, ಆರ್ಥಿಕ ತೊಂದರೆ, ವ್ಯಾಪಾರ ನಷ್ಟದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>