ಏನಿದು ಘಟನೆ?: ಮಾನಸಿಕ ಅಸ್ವಸ್ಥರು ಎನ್ನಲಾಗಿದ್ದ ರಾಯ್, ಜೂನ್ 9ರ ಮಧ್ಯರಾತ್ರಿ ಕತ್ತಿ ಹಿಡಿದುಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದಿದ್ದಾರೆ; ಆಗ ರಾಯ್, ಪೊಲೀಸರ ಮೇಲೆ ಕತ್ತಿ ಬೀಸಿದ್ದಾರೆ ಎನ್ನಲಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಕೈಗೆ ಗಾಯವಾಗಿತ್ತು. ನಂತರ, ಪೊಲೀಸರು ಅವರನ್ನು ಪೊಲೀಸ್ ಠಾಣೆಗೆ ಕರೆತಂದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಂದು ರಾತ್ರಿಯೇ ಅವರ ತಾಯಿಯನ್ನು ಠಾಣೆಗೆ ಕರೆಯಿಸಿ, ಅವರೊಂದಿಗೆ ಕಳುಹಿಸಿಕೊಟ್ಟಿದ್ದರು.