ಸಿದ್ದಾಪುರ( ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಚೆಟ್ಟಳ್ಳಿಯಲ್ಲಿ ಕಾಡಾನೆಯೊಂದು ಮಹಮ್ಮದ್ (60) ಎಂಬುವವರ ಮೇಲೆ ದಾಳಿ ನಡೆಸಿದ್ದು, ಗಾಯಗೊಂಡ ಮಹಮ್ಮದ್ ಮೃತಪಟ್ಟಿದ್ದಾರೆ.
ಮಲ್ಕೋಡು ನಿವಾಸಿಯಾದ ಅವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟರು.
ಚೆಟ್ಟಳ್ಳಿ, ಕಂಡಕ್ಕರೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.