<p><strong>ಸಿದ್ದಾಪುರ(ಕೊಡಗು): </strong>ಮಾಲ್ದಾರೆ ಸಮೀಪದ ಅಸ್ತಾನ ಹಾಡಿಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿದ್ದಾರೆ.</p>.<p>ಅವರೆಗುಂದ ಗ್ರಾಮದ ಕಾಫಿ ಬೆಳೆಗಾರ ಪೆಮ್ಮಯ್ಯ (69) ಮೃತ ದುರ್ದೈವಿ.</p>.<p>ಪೆಮ್ಮಯ್ಯ ಶುಕ್ರವಾರ ಬೆಳಿಗ್ಗೆ ಮನೆಯಿಂದ ಪಟ್ಟಣಕ್ಕೆ ತೆರಳಿದ್ದು, ಮನೆಗೆ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಗ್ರಾಮದಲ್ಲಿ ಹುಡುಕಾಡಿದ್ದಾರೆ. ಆದರೆ ಅವರು ಪತ್ತೆ ಆಗಿರಲಿಲ್ಲ. ಶನಿವಾರ ಮತ್ತೆ ಹುಡುಕಾಟ ನಡೆಸಿದಾಗ ಅವರೆಗುಂದ ಗ್ರಾಮದ ಅಸ್ತಾನ ಹಾಡಿಯ ರಸ್ತೆಯ ಬಳದಿಯಲ್ಲಿ ಮೃತದೇಹ ಪತ್ತೆಯಾಗಿದೆ.<br />ಕಾಡಾನೆ ದಾಳಿಯಿಂದಲೇ ಪೆಮ್ಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಸಿದ್ದಾಪುರ ಪಿ.ಎಸ್.ಐ ಬೋಜಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ(ಕೊಡಗು): </strong>ಮಾಲ್ದಾರೆ ಸಮೀಪದ ಅಸ್ತಾನ ಹಾಡಿಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿದ್ದಾರೆ.</p>.<p>ಅವರೆಗುಂದ ಗ್ರಾಮದ ಕಾಫಿ ಬೆಳೆಗಾರ ಪೆಮ್ಮಯ್ಯ (69) ಮೃತ ದುರ್ದೈವಿ.</p>.<p>ಪೆಮ್ಮಯ್ಯ ಶುಕ್ರವಾರ ಬೆಳಿಗ್ಗೆ ಮನೆಯಿಂದ ಪಟ್ಟಣಕ್ಕೆ ತೆರಳಿದ್ದು, ಮನೆಗೆ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಗ್ರಾಮದಲ್ಲಿ ಹುಡುಕಾಡಿದ್ದಾರೆ. ಆದರೆ ಅವರು ಪತ್ತೆ ಆಗಿರಲಿಲ್ಲ. ಶನಿವಾರ ಮತ್ತೆ ಹುಡುಕಾಟ ನಡೆಸಿದಾಗ ಅವರೆಗುಂದ ಗ್ರಾಮದ ಅಸ್ತಾನ ಹಾಡಿಯ ರಸ್ತೆಯ ಬಳದಿಯಲ್ಲಿ ಮೃತದೇಹ ಪತ್ತೆಯಾಗಿದೆ.<br />ಕಾಡಾನೆ ದಾಳಿಯಿಂದಲೇ ಪೆಮ್ಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಸಿದ್ದಾಪುರ ಪಿ.ಎಸ್.ಐ ಬೋಜಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>