ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ

Published 10 ಮೇ 2024, 10:16 IST
Last Updated 10 ಮೇ 2024, 10:16 IST
ಅಕ್ಷರ ಗಾತ್ರ

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು‌ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಆರೋಪಿ ಪ್ರಕಾಶ್ (32) ಇನ್ನೂ ಸಿಕ್ಕಿಲ್ಲ. ಈ ವೇಳೆ ಆತನಿಂದ ಅಪಾಯ ಎದುರಾಗಬಹುದು ಎಂಬ ಕಾರಣಕ್ಕೆ ಸಂತ್ರಸ್ತ ಕುಟುಂಬಕ್ಕೆ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ.

ಆರೋಪಿಯಿಂದ ಹಲ್ಲೆಗೆ ಒಳಗಾಗಿರುವ ಬಾಲಕಿಯ ತಂದೆ ಹಾಗೂ ತಾಯಿ ದಾಖಲಾಗಿರುವ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲೂ ಸಶಸ್ತ್ರಧಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಬಾಲಕಿಯನ್ನು ಎಳೆದೊಯ್ಯುವ ವೇಳೆ ಆರೋಪಿಯು ಆಕೆಯ ತಾಯಿಯ ಕೈ‌ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಇದರಿಂದ ಅವರ ಕೈ ನರಗಳು ತುಂಡರಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಪೊಲೀಸ್ ಭದ್ರತೆಯಲ್ಲೇ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಶ್ವಾನದಳ ಹುಡುಕಾಟ ನಡೆಸಿದಾಗ ಆರೋಪಿ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಸಿಕ್ಕಿದೆ. ಆದರೆ ಆರೋಪಿಯ ಸುಳಿವು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT