ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಡ್ಜ್‌ನಲ್ಲಿ ವ್ಯಕ್ತಿ ಸಾವು

Last Updated 2 ಜುಲೈ 2021, 4:47 IST
ಅಕ್ಷರ ಗಾತ್ರ

ವಿರಾಜಪೇಟೆ: ಮದುವೆ ಸಮಾರಂಭಕ್ಕೆ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಟ್ಟಣದ ಲಾಡ್ಜ್‌ನಲ್ಲಿ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ಕೃಷ್ಣಪ್ಪ ಅವರ ಪುತ್ರ ಮಧು (33) ಮೃತ ವ್ಯಕ್ತಿ.

‘ಸಮೀಪದ ಚೆಂಬೆಬೆಳ್ಳೂರು ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಮಧು ಅವರು ಮೂವರು ಸ್ನೇಹಿತರೊಂದಿಗೆ ಜೂ.30 ರಂದು ಬಂದಿದ್ದರು. ಅದೇ ದಿನ ಸಂಜೆ ವಿವಾಹ ಸಮಾರಂಭ ಮುಗಿಸಿಕೊಂಡು ರಾತ್ರಿ ಪಟ್ಟಣದ ದೊಡ್ಡಟ್ಟಿ ಚೌಕಿ ಬಳಿಯಿರುವ ಲಾಡ್ಜ್‌ನಲ್ಲಿ ನಾಲ್ವರು ತಂಗಿದ್ದರು. ಗುರುವಾರ ಬೆಳಿಗ್ಗೆ ಮಧು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಹರಿಪ್ರಸಾದ್ ಎಂಬುವವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಮಹಜರು ನಡಸಿ ಕ್ರಮ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT