ಕಾಡಾನೆ ಹಾವಳಿ ತಡೆಗೆ ಆಗ್ರಹ: ಕರಡಿಗೋಡು ಗ್ರಾಮದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡಾನೆ ಹಾವಳಿ ಮಿತಿಮೀರಿದ್ದು, ಹಿಂಡು ಹಿಂಡಾಗಿ ಕಾಫಿ ತೋಟದಲ್ಲಿ ಬೀಡುಬಿಡುತ್ತಿವೆ. ಫಸಲನ್ನು ನಾಶ ಮಾಡುತ್ತಿದ್ದು, ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ದಿನ ಕಾಡಾನೆಗಳು ತೋಟದಲ್ಲಿ ದಾಂದಲೆ ನಡೆಸುತ್ತಿದ್ದು, ಕಾಫಿ ಗಿಡಗಳನ್ನು ಹಾನಿಮಾಡುತ್ತಿವೆ’ ಎಂದು ಬೆಳೆಗಾರರು ಆರೋಪಿಸಿದ್ದಾರೆ.